Featured

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR – vishwanews24

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

ಆನೇಕಲ್: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ ಓರಲ್ ಮೆಡಿಸಿನ್ ಮತ್ತು ರೆಡಿಯಾಲಜಿ ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಜ.9ರಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಮೃತಳ ತಾಯಿ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ. ಯಶಸ್ವಿನಿ ಸಾವಿಗೆ ಕಾಲೇಜು ಉಪನ್ಯಾಸಕರ ನೀಡುತ್ತಿದ್ದ ಕಾರಣ, ಅಲ್ಲದೇ ಕ್ಲಾಸಿನಲ್ಲಿ ಯಶಸ್ವಿನಿ ಬಣ್ಣದ ಬಗ್ಗೆ ಮಾತನಾಡಿ ಟೀಕಿಸಿದ್ದಾರೆ. ಸೆಮಿನಾರ್ ಅಟೆಂಡ್ ಮಾಡಲು ಸಹ ಅವಕಾಶ ನೀಡಿಲ್ಲ, ಕಣ್ಣು ನೋವು ಎಂದಾಗ ಅವಮಾನಿಸಿ ಕಿರುಕುಳ ನೀಡಿದ್ದಾರೆ. ಹೀಗಾಗಿ ಉಪನ್ಯಾಸಕರ ವಿರುದ್ಧ ಆದಷ್ಟು ಬೇಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದ್ದಾರೆ.

ಏನಿದು ಪ್ರಕರಣ?
ಮೃತ ವಿದ್ಯಾರ್ಥಿನಿ ಬುಧವಾರ (ಜ.7) ಕಣ್ಣು ನೋವಿನಿಂದಾಗಿ ಕಾಲೇಜಿಗೆ ರಜೆ ಹಾಕಿದ್ದರು. ಮಾರನೇ ದಿನ ಕಾಲೇಜಿಗೆ ಹೋದಾಗ ಕಣ್ಣಿಗೆ ಯಾವ ಕಣ್ಣಿನ ಡ್ರಾಪ್ಸ್ ಬಳಸಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿಕೊಂಡೆ? ಇಡೀ ಬಾಟಲ್ ಸುರಿದುಕೊಂಡ್ಯಾ ಎಂದು ವಿದ್ಯಾರ್ಥಿಗಳ ಮುಂದೆ ಉಪನ್ಯಾಸಕರು ಅವಮಾನಿಸಿದ್ದರು. ಅದಾದ ಬಳಿಕ ಸೆಮಿನಾರ್‌ಗೆ ಅವಕಾಶ ನೀಡಿರಲಿಲ್ಲ. ಜೊತೆಗೆ ರೆಡಿಯಾಲಜಿ ಕೇಸ್ ಕೂಡ ನೀಡದೇ ಕಿರುಕುಳ ನೀಡಿದ್ದರು ಎಂದು ಆರೋಪ ಕೇಳಿಬಂದಿದೆ.

ಈ ಕುರಿತು ಮೃತಳ ತಾಯಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ಆರೋಪಿಸಿ, ಕಾಲೇಜಿಗೆ ರಜೆ ಹಾಕಿದ್ದಕ್ಕೆ ನನ್ನ ಮಗಳಿಗೆ ಅವಮಾನಿಸಿದ್ದಾರೆ. ಅವಳ ಕಣ್ಣಿಗೆ ಗಾಯ ಆಗಿತ್ತು. ಹೀಗಾಗಿ ನನಗೆ ಹೇಳಿಯೇ ರಜೆ ತೆಗೆದುಕೊಂಡಿದ್ದಾಳೆ. ಯಾವ ಡ್ರಾಪ್ಸ್ ಹಾಕಿದೆ ಅಂತೆಲ್ಲ ವಿದ್ಯಾರ್ಥಿಗಳ ಮುಂದೆ ಕೇಳಿ, ಅವಮಾನಿಸಿದ್ದಾರೆ. ಯಾಕೆ ಅವರಿಗೆ ಮಕ್ಕಳು ಇಲ್ವಾ? ಅವಳು ಇದನ್ನೆಲ್ಲ ನನಗೆ ಹೇಳಿದ್ದಾಳೆ. ಉಪನ್ಯಾಸಕರು ಮಾತ್ರವಲ್ಲದೇ ಕಾಲೇಜು ಆಡಳಿತ ಮಂಡಳಿ ಕೂಡ ಕಿರುಕುಳ ನೀಡಿದ್ದಾರೆ. ಹೀಗಾಗಿ ಅವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದರು. ಅದಾದ ಬಳಿಕ ಸಿಕ್ಕಿದ್ದ ಡೆತ್‌ನೋಟ್‌ನಲ್ಲಿ, ಮೃತ ಯಶಸ್ವಿನಿ ನಾನು ಬದುಕಕ್ಕೆ ಯೋಗ್ಯಳಲ್ಲ, ಕ್ಷಮಿಸಿಬಿಡಿ. ನನ್ನ ಸಾವಿಗೆ ಯಾರು ಕಾರಣರಲ್ಲ. ನಾನು ಒಳ್ಳೆಯ ಮಗಳಲ್ಲ. ಅಮ್ಮ ಥ್ಯಾಂಕ್ಯೂ ಸೋ ಮಚ್ ಎಂದು ಬರೆದುಕೊಂಡಿದ್ದರು.

ಇನ್ನೂ ಕಾಲೇಜಿನಲ್ಲಿ ಮೃತ ಯಶಸ್ವಿನಿ ಅಳುತ್ತಾ ಕುಳಿತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಾಲೇಜು ಸಿಬ್ಬಂದಿ ಹಾಗೂ ಸೀನಿಯರ್ ಯಶಸ್ವಿನಿಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಬರೋದು ಸ್ಲಂನಿಂದ ಕೋತಿಯ ಹಾಗೆ ಇದ್ದೀಯಾ ಎಂದು ಅವಮಾನಿಸಿದ್ದರು. ಈ ಬಗ್ಗೆ ಪೋಷಕರು ಆಡಳಿತ ಮಂಡಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago