ಗದಗ: ಡೆತ್ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ.
ಪೂಜಾ ಅಮರೇಶ ಅಯ್ಯನಗೌಡರ್(27) ಮೃತ ಮಹಿಳೆ. ಪೂಜಾ, ಡೆತ್ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂಜಾಗೆ ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು. ಆಕೆ ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಲ್ಲದೇ ಅತ್ತೆ, ಮಾವ, ಬಾವ ಒಟ್ಟಾಗಿ ಆಕೆಯನ್ನು ನೇಣು ಹಾಕಿರುವುದಾಗಿ ಕುಟುಂಬಸ್ಥರು ಆರೋಪಿಸಿ, ಬಾವ ವೀರನಗೌಡನಿಗೆ ಥಳಿಸಿದ್ದಾರೆ. ಸ್ಥಳದಲ್ಲಿ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪೂಜಾ, 4 ತಿಂಗಳ ಹಿಂದೆಯಷ್ಟೇ ಅಮರೇಶ ಎಂಬುವವರನ್ನು ಮದುವೆಯಾಗಿದ್ದರು. ಪತಿ ಅಮರೇಶ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರವಷ್ಟೇ ಚೆನ್ನೈಗೆ ಕೆಲಸಕ್ಕೆ ತೆರಳಿದ್ದರು. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…