ರಾಜ್ಯ ನ್ಯೂಸ್

ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು – vishwanews24

ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ತುಮಕೂರು : ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸದಾಶಿವ ನಗದರಲ್ಲಿ ಭಾನುವಾರ ನಡೆದಿದೆ.

ಡೆತ್ ನೋಟ್ ಬರೆದಿಟ್ಟು, ಮೂವರು ಮಕ್ಕಳಿಗೆ ವಿಷ ಕುಡಿಸಿ ದಂಪತಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಎಸ್‌ ಪಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದಾಶಿವನಗರ ನಿವಾಸಿ ಗರೀಬ್ ಸಾಬ್ (32) , ಪತ್ನಿ ಸುಮಯ್ಯ (30) , ಪುತ್ರಿ ಹಾಜಿರಾ(14) , ಪುತ್ರರಾದ ಮೊಹ್ಮದ್ ಸುಭಾನ್(10), ಮೊಹಮದ್ ಮುನೀರ್ (8) ಮೃತರು.

ಕಬಾಬ್ ವ್ಯಾಪಾರದಲ್ಲಿ ಆದಾಯವಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. ಹೀಗಾಗಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಡೆತ್‌ನೋಟ್‌ನಲ್ಲಿ ಬರೆದಿರುವುದು ಕಂಡುಬಂದಿದೆ.

ಸದಾಶಿವ ನಗರದ 3ನೇ ಬಿ ಮಖ್ಯರಸ್ತೆಯಲ್ಲಿರುವ ನಮ್ಮ ಮನೆಯ ಕೆಳಗಡೆಯ ಮನೆಯವರು ನಮಗೆ ಬಹಳ ಕಷ್ಟ ಕೊಟ್ಟಿದ್ದಾರೆ ಅವರ ವಿರುದ್ಧ ಗೃಹಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಗರೀಬ್ ಸಾಬ್ ಮನವಿ ಮಾಡಿದ್ದಾರೆ.

ಬಡತನದಲ್ಲಿ ಹೇಗೋ ಜೀವನ ಮಾಡಿಕೊಂಡಿದ್ದೆವು. ನಾವು ಬಾಡಿಗೆ ಮನೆಯಲ್ಲಿದ್ದೆವು, ಖಲಂದರ್ ಬಾಡಿಗೆಯಲ್ಲಿದ್ದ ನಾವು ಸಂಘದಲ್ಲಿ ಎರಡು ಸಾವಿರ ಕಮಿಷನ್ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದೆವು. ಇವನ ಮಾತು ಕೇಳದೆ ಇದ್ದರೆ ಪೂರ್ತಿ ಸಾಲ ಕಟ್ಟು ಅಂತ ಹಿಂಸೆ ಕೊಡುತ್ತಿದ್ದ.

ಸಾಲ ಕೊಟ್ಟವರಿಗೆ ಇಲ್ಲಸಲ್ಲದ್ದು ಹೇಳಿ ಗಲಾಟೆ ಮಾಡೋ ಹಾಗೆ ಮಾಡಿದ್ದ. ಇದೇ ರೀತಿ ಅವನ ದೊಡ್ಡ ಮಗ, ಮಗಳು, ಮಹಡಿ ಮನೆಯ ಶಬಾನಾ, ಅವಳ ಮಗಳು ಎಲ್ಲರೂ ತೊಂದರೆ ಕೊಟ್ಟಿದ್ದಾರೆ. ನಾವು ಸಾಯೋಕೆ ಈ 5 ಜನರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಮೃತ ಗರೀಬ್‌ ಸಾಬ್‌ ಬರೆದಿದ್ದಾರೆ.

ಪೊಲೀಸರು ಈ ಐವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

1 day ago