Featured

ಡೆಲ್ಟಾ ವೈರಸ್ : ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್; ನೆಗೆಟಿವ್ ವರದಿ ಇಲ್ಲದ್ದಕ್ಕೆ ಬಸ್ ವಾಪಸ್ – Vishwanews24

ಡೆಲ್ಟಾ ವೈರಸ್ : ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್; ನೆಗೆಟಿವ್ ವರದಿ ಇಲ್ಲದ್ದಕ್ಕೆ ಬಸ್ ವಾಪಸ್ – Vishwanews24

ಬೆಳಗಾವಿ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿ ಖಡಕ್ ನಿರ್ಬಂಧ ಹೇರಲಾಗಿದ್ದು, ಪುಣೆಯಿಂದ ಹುಬ್ಬಳ್ಳಿ ಕಡೆಗೆ ಸಾರಿಗೆ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರ ಕೊರೊನಾ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹಾಗೂ ಲಸಿಕಾ ಪ್ರಮಾಣ ಪತ್ರ ಇಲ್ಲದ್ದಕ್ಕೆ ಬಸ್ ಅನ್ನು ಕೊಗೊಳ್ಳಿ ಚೆಕ್ ಪೋಸ್ಟ್ ದಿಂದ ಪುಣೆಗೆ ವಾಪಸ್ ಕಳುಹಿಸಲಾಗಿದೆ.

ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಕೊಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಖಡಕ್ ತಪಾಸಣೆ ಮುಂದುವರಿಸಿರುವ ಪೊಲೀಸರು ಗಡಿ ದಾಟಿ ಕನಾಟಕಕ್ಕೆ ಬರುತ್ತಿರುವ ಪ್ರತಿಯೊಬ್ಬರ ವರದಿಯನ್ನು ತಪಾಸಣೆ ನಡೆಸಿದ್ದಾರೆ.

ಪುಣೆಯಿಂದ ಬರುತ್ತಿದ್ದ ಬಸ್‌ನಲ್ಲಿ ಸುಮಾರು 14-15 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದರು. ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ಯಾವೊಬ್ಬ ಪ್ರಯಾಣಿಕರ ಬಳಿಯೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರಲಿಲ್ಲ. ಜತೆಗೆ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವೂ ಇರಲಿಲ್ಲ. ಹೀಗಾಗಿ ಪೊಲೀಸರು ಬಸ್ ವಾಪಸ್ ಕಳುಹಿಸಿದ್ದಾರೆ. ಜತೆಗೆ ಕೆಲವು ಖಾಸಗಿ ಬಸ್‌ಗಳನ್ನೂ ವಾಪಸ್ ಕಳುಹಿಸಲಾಗಿದೆ.

ಡಿವೈಎಸ್‌ಪಿ ಮನೋಜಕುಮಾರ ನಾಯಿಕ, ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ, ಪಿಎಸ್‌ಐ ಅನಿಲ್ ಕುಂಬಾರ ಸೇರಿದಂತೆ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಚೆಕ್ ಪೋಸ್ಟ್ ನಲ್ಲಿ ಕಂದಾಯ, ಆರೋಗ್ಯ ಹಾಗೂ ಇಲಾಖೆ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸಿ, ಪ್ರಯಾಣಿಕರ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಪರಿಶೀಲಿಸಿ ಕರ್ನಾಟಕದ ಒಳಗೆ ಬಿಡುತ್ತಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ, ಕಡ್ಡಾಯವಾಗಿ ಪ್ರಯಾಣಿಕರನ್ನು ತಪಾಸಣೆ ನಡೆಸಿಯೇ ಒಳಗೆ ಬೀಡಬೇಕು ಎಂದು ಸೂಚನೆ ನೀಡಿದರು.

ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ. ಮಹಾರಾಷ್ಟçದಿಂದ ಕರ್ನಾಟಕಕ್ಕೆ ಬರುವ ಎಲ್ಲ ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಆರ್‌ಟಿಪಿಸಿಆರ್ ರಿಪೋರ್ಟ್ ಹೊಂದುವುದು ಕಡ್ಡಾಯವಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago