Featured

ಡೆಲ್ಟಾ ವೈರಸ್ : ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್; ನೆಗೆಟಿವ್ ವರದಿ ಇಲ್ಲದ್ದಕ್ಕೆ ಬಸ್ ವಾಪಸ್ – Vishwanews24

ಡೆಲ್ಟಾ ವೈರಸ್ : ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್; ನೆಗೆಟಿವ್ ವರದಿ ಇಲ್ಲದ್ದಕ್ಕೆ ಬಸ್ ವಾಪಸ್ – Vishwanews24

ಬೆಳಗಾವಿ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿ ಖಡಕ್ ನಿರ್ಬಂಧ ಹೇರಲಾಗಿದ್ದು, ಪುಣೆಯಿಂದ ಹುಬ್ಬಳ್ಳಿ ಕಡೆಗೆ ಸಾರಿಗೆ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರ ಕೊರೊನಾ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹಾಗೂ ಲಸಿಕಾ ಪ್ರಮಾಣ ಪತ್ರ ಇಲ್ಲದ್ದಕ್ಕೆ ಬಸ್ ಅನ್ನು ಕೊಗೊಳ್ಳಿ ಚೆಕ್ ಪೋಸ್ಟ್ ದಿಂದ ಪುಣೆಗೆ ವಾಪಸ್ ಕಳುಹಿಸಲಾಗಿದೆ.

ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಕೊಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಖಡಕ್ ತಪಾಸಣೆ ಮುಂದುವರಿಸಿರುವ ಪೊಲೀಸರು ಗಡಿ ದಾಟಿ ಕನಾಟಕಕ್ಕೆ ಬರುತ್ತಿರುವ ಪ್ರತಿಯೊಬ್ಬರ ವರದಿಯನ್ನು ತಪಾಸಣೆ ನಡೆಸಿದ್ದಾರೆ.

ಪುಣೆಯಿಂದ ಬರುತ್ತಿದ್ದ ಬಸ್‌ನಲ್ಲಿ ಸುಮಾರು 14-15 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದರು. ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ಯಾವೊಬ್ಬ ಪ್ರಯಾಣಿಕರ ಬಳಿಯೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರಲಿಲ್ಲ. ಜತೆಗೆ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವೂ ಇರಲಿಲ್ಲ. ಹೀಗಾಗಿ ಪೊಲೀಸರು ಬಸ್ ವಾಪಸ್ ಕಳುಹಿಸಿದ್ದಾರೆ. ಜತೆಗೆ ಕೆಲವು ಖಾಸಗಿ ಬಸ್‌ಗಳನ್ನೂ ವಾಪಸ್ ಕಳುಹಿಸಲಾಗಿದೆ.

ಡಿವೈಎಸ್‌ಪಿ ಮನೋಜಕುಮಾರ ನಾಯಿಕ, ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ, ಪಿಎಸ್‌ಐ ಅನಿಲ್ ಕುಂಬಾರ ಸೇರಿದಂತೆ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಚೆಕ್ ಪೋಸ್ಟ್ ನಲ್ಲಿ ಕಂದಾಯ, ಆರೋಗ್ಯ ಹಾಗೂ ಇಲಾಖೆ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸಿ, ಪ್ರಯಾಣಿಕರ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಪರಿಶೀಲಿಸಿ ಕರ್ನಾಟಕದ ಒಳಗೆ ಬಿಡುತ್ತಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ, ಕಡ್ಡಾಯವಾಗಿ ಪ್ರಯಾಣಿಕರನ್ನು ತಪಾಸಣೆ ನಡೆಸಿಯೇ ಒಳಗೆ ಬೀಡಬೇಕು ಎಂದು ಸೂಚನೆ ನೀಡಿದರು.

ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ. ಮಹಾರಾಷ್ಟçದಿಂದ ಕರ್ನಾಟಕಕ್ಕೆ ಬರುವ ಎಲ್ಲ ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಆರ್‌ಟಿಪಿಸಿಆರ್ ರಿಪೋರ್ಟ್ ಹೊಂದುವುದು ಕಡ್ಡಾಯವಾಗಿದೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

55 minutes ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

2 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

2 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

3 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

3 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 hours ago