ಉಡುಪಿ : ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್. ಡ್ರಗ್ಸ್ ಮುಕ್ತ ಕರ್ನಾಟಕವೇ ನಮ್ಮ ಗುರಿ ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಹೇಳಿದ್ದಾರೆ.
ಉಡುಪಿ ಎಸ್ಪಿ ಕಚೇರಿಯಲ್ಲಿ ಸಭೆಯ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದು ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಬೆಳಗಾಂ ಹುಬ್ಬಳ್ಳಿ ಚಿತ್ರದುರ್ಗ ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ.ಈಗ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡುವ ಗುರಿ ಹೊಂದಿದ್ದೇವೆ. ಚಾಕಲೇಟ್ ಡ್ರಿಂಕ್ಸ್ಗಳಲ್ಲೂ ಡ್ರಗ್ಸ್ ಬೆರೆಸುತ್ತಾರೆ. ಇವೆಲ್ಲದರ ಬಗ್ಗೆ ಕ್ರಮ ತೆಗೆದುಕೊಳ್ಳಲು ಐಜಿ- ಎಸ್ಪಿಗೆ ಸೂಚಿಸಿದ್ದು ರಿಸಲ್ಟ್ ತೋರಿಸುವ ಜವಾಬ್ದಾರಿ ಅವರ ಮೇಲಿದೆ. ಡ್ರಗ್ಸ್ ದಂಧೆಯನ್ನು ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಹೀಗೆ ಯಾವ ಮಾರ್ಗದಲ್ಲೂ ನಡೆಸಿದರೂ ಮಟ್ಟ ಹಾಕುತ್ತೇವೆ. ಸೋಮವಾರ ಮುಖ್ಯಮಂತ್ರಿ ಸಭೆ ನಡೆಸಿ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಹಾಗೆಯೇ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಬೇರೆ ಕಡೆಯಲ್ಲೂ ನಡೆಯುತ್ತಿದೆ ಆದರೆ ಅದು ಸುದ್ದಿಯಾಗುತ್ತಿಲ್ಲ ಎಂದು ತಿಳಿಸಿದರು.
ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರಗಳ ಬಗ್ಗೆ ಬೆಂಗಳೂರು ಕಮಿಷನರ್ ಮಾತಾನಾಡುತ್ತಾರೆ. ಆದರೆ ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ ಅವರು, ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದು ಅದು ನಮ್ಮ ಗುರಿ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…