ಉಡುಪಿ : ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್. ಡ್ರಗ್ಸ್ ಮುಕ್ತ ಕರ್ನಾಟಕವೇ ನಮ್ಮ ಗುರಿ ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಹೇಳಿದ್ದಾರೆ.
ಉಡುಪಿ ಎಸ್ಪಿ ಕಚೇರಿಯಲ್ಲಿ ಸಭೆಯ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದು ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಬೆಳಗಾಂ ಹುಬ್ಬಳ್ಳಿ ಚಿತ್ರದುರ್ಗ ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ.ಈಗ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡುವ ಗುರಿ ಹೊಂದಿದ್ದೇವೆ. ಚಾಕಲೇಟ್ ಡ್ರಿಂಕ್ಸ್ಗಳಲ್ಲೂ ಡ್ರಗ್ಸ್ ಬೆರೆಸುತ್ತಾರೆ. ಇವೆಲ್ಲದರ ಬಗ್ಗೆ ಕ್ರಮ ತೆಗೆದುಕೊಳ್ಳಲು ಐಜಿ- ಎಸ್ಪಿಗೆ ಸೂಚಿಸಿದ್ದು ರಿಸಲ್ಟ್ ತೋರಿಸುವ ಜವಾಬ್ದಾರಿ ಅವರ ಮೇಲಿದೆ. ಡ್ರಗ್ಸ್ ದಂಧೆಯನ್ನು ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಹೀಗೆ ಯಾವ ಮಾರ್ಗದಲ್ಲೂ ನಡೆಸಿದರೂ ಮಟ್ಟ ಹಾಕುತ್ತೇವೆ. ಸೋಮವಾರ ಮುಖ್ಯಮಂತ್ರಿ ಸಭೆ ನಡೆಸಿ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಹಾಗೆಯೇ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಬೇರೆ ಕಡೆಯಲ್ಲೂ ನಡೆಯುತ್ತಿದೆ ಆದರೆ ಅದು ಸುದ್ದಿಯಾಗುತ್ತಿಲ್ಲ ಎಂದು ತಿಳಿಸಿದರು.
ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರಗಳ ಬಗ್ಗೆ ಬೆಂಗಳೂರು ಕಮಿಷನರ್ ಮಾತಾನಾಡುತ್ತಾರೆ. ಆದರೆ ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ ಅವರು, ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದು ಅದು ನಮ್ಮ ಗುರಿ ಎಂದು ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…