ಬೆಂಗಳೂರು: ಡ್ರಗ್ಸ್ ಎನ್ನುವುದು ದೇಹವನ್ನು ಮಾತ್ರವಲ್ಲ ದೇಶವನ್ನು ಕೂಡ ದುರ್ಬಲ ಮಾಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಡ್ರಗ್ಸ್ ಮಾಫಿಯಾ ಸಂಬಂಧ ಟ್ವೀಟ್ ಮಾಡಿರುವ ಅವರು, ಡ್ರಗ್ಸ್ ಎನ್ನುವುದು ದೇಹವನ್ನು ಮಾತ್ರವಲ್ಲ ದೇಶವನ್ನು ಕೂಡ ದುರ್ಬಲ ಮಾಡುತ್ತದೆ. ಆದ್ದರಿಂದ ಯಾವುದೇ ರೀತಿಯ ಡ್ರಗ್ಸ್ ದೇಹದಿಂದ ಮಾತ್ರವಲ್ಲ ದೇಶದಿಂದಲೂ ಎಷ್ಟು ದೂರ ಇಡಲು ಸಾಧ್ಯವೋ ಅಷ್ಟು ದೂರ ಇಡಲು ನಮ್ಮ ಪಕ್ಷದ ಕಾರ್ಯಕರ್ತರು ಯುವಜನಾಂಗದಲ್ಲಿ ಜಾಗೃತಿ ಮೂಡಿಸಬೇಕು ಎಂದಿದ್ದಾರೆ.
ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಕ್ತಿಮೀರಿ ಕೆಲಸ ಮಾಡುತ್ತಿವೆ. ನಮ್ಮ ಗೃಹಸಚಿವರು ಪೊಲೀಸ್ ಇಲಾಖೆಗೆ ಡ್ರಗ್ಸ್ ಜಾಲ ಮಟ್ಟ ಹಾಕಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕಲು ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ನಳಿನ್ ಬರೆದುಕೊಂಡಿದ್ದಾರೆ.
ಡ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂದು ನಟ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ ನೀಡಿದ್ದು, ನನಗೆ ರಕ್ಷಣೆ ಕೊಟ್ಟರೆ ಹೆಸರು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದರು. ಅಂತೆಯೇ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದ್ರಜಿತ್ ತಮ್ಮ ಬಳಿ ಇದ್ದಂತಹ ಸಾಕ್ಷ್ಯಗಳನ್ನು ಸಿಸಿಬಿ ಕೈಗಿತ್ತಿದ್ದು, ತನಿಖೆ ನಡೆಯುತ್ತಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…