Featured

ಡ್ರಗ್ಸ್ ದಂಧೆ ಪ್ರಕರಣ : ರಾಜ್ಯದಲ್ಲಿರುವ 32 ರಾಜಕಾರಣಿಗಳು ಶಾಮೀಲು : ಪ್ರಮೋದ್ ಮುತಾಲಿಕ್ -Vishwanews24

ಡ್ರಗ್ಸ್ ದಂಧೆ ಪ್ರಕರಣ : ರಾಜ್ಯದಲ್ಲಿರುವ 32 ರಾಜಕಾರಣಿಗಳು ಶಾಮೀಲು : ಪ್ರಮೋದ್ ಮುತಾಲಿಕ್ -Vishwanews24

ಮೈಸೂರು,: ರಾಜ್ಯದಲ್ಲಿರುವ ಡ್ರಗ್ಸ್ ದಂಧೆ ಪ್ರಕರಣದಲ್ಲಿ 32 ರಾಜಕಾರಣಿಗಳು ಶಾಮೀಲಾಗಿದ್ದು, ಇವರ ವಿರುದ್ಧ ಗೃಹಸಚಿವರಿಗೆ ನೇರವಾಗಿ ದೂರು ಸಲ್ಲಿಸಲಾಗುವುದು ಎಂದು ಶ್ರೀ ರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಇದೊಂದು ಕೇವಲ ಒಂದು ಮಾಫಿಯಾ ಅಲ್ಲ, ಪಾಕಿಸ್ತಾನದಿಂದ ದಾವೂದ್‌ ಇಬ್ರಾಹಿಂ ನಡೆಸುತ್ತಿರುವ ಡ್ರಗ್ಸ್ ಜಿಹಾದ್. ಈ ದಂಧೆಯಲ್ಲಿ ಸಿಲುಕಿರುವ ರಾಜಕಾರಣಿಗಳು ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಲ್ಲಿದ್ದಾರೆ. ಬಿಜೆಪಿಗೆ ಸೇರಿದ ಬಹುತೇಕ ಬಿಬಿಎಂಪಿ ಸದಸ್ಯರ ಪುತ್ರರು ಪಬ್‌ ಹಾಗೂ ಕ್ಲಬ್‌ಗಳನ್ನು ನಡೆಸುತ್ತಿದ್ದು, ಇಲ್ಲೆಲ್ಲ ಮಾದಕವಸ್ತುಗಳು ಸಿಗುತ್ತಿವೆ. ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತೆಸೆಯುತ್ತೇವೆ ಎಂದು ಹೇಳುವ ಮೂಲಕ ರಾಜಕಾರಣಿಗಳು ಬುರುಡೆ ಬಿಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಕರ್ನಾಟಕದ ಪೊಲೀಸರಿಗೆ ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಮಾದಕವಸ್ತು ಇದೆ ಎಂಬ ಮಾಹಿತಿ ಗೊತ್ತಿರಲಿಲ್ಲವೇ? ಇಲ್ಲಿನ ಗುಪ್ತಚರ ಇಲಾಖೆ ಕತ್ತೆ ಕಾಯುತ್ತಿತ್ತಾ ಎಂಬುದಾಗಿ ಪ್ರಶ್ನಿಸಿದ್ದಾರೆ.

ನಟಿ ಸಂಜನಾ ಶಾಸಕ ಜಮೀರ್ ಅಹಮ್ಮದ್ ಸೇರಿದಂತೆ ಹಲವರ ಹೆಸರನ್ನು ಹೇಳಿರುವಾಗ ಅವರ ವಿರುದ್ಧ ಪೊಲೀಸರು ವಿಚಾರಣೆ ನಡೆಸುತ್ತಿಲ್ಲ. ಇದೊಂದು ರೀತಿಯ ಹೊಂದಾಣಿಕೆ ರಾಜಕೀಯ ಎಂದು ಎಂದಿದ್ದಾರೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago