Featured

ದೇವರ ಫೋಟೋ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಗ್ಯಾಂಗ್​ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ.-vishwanews24

ಬೆಂಗಳೂರು: ಗಣಪತಿ ದೇವರ ಫೋಟೋ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಗ್ಯಾಂಗ್​ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ಅರುಣ್ ಆಂಥೋನಿ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಅಮಲ್‌ ಬೈಜು ಪರಾರಿಯಾಗಿದ್ದಾನೆ. ಅರುಣ್, ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿಯ ಸ್ಪರ್ಶ್ ಮತ್ತು ಹೆಲ್ತ್ ಸಿಟಿಯಲ್ಲಿ ಎಕ್ಸ್ ರೇ ಟೆಕ್ನಿಶಿಯನ್​ ಆಗಿ ಕೆಲಸ ಮಾಡುತ್ತಿದ್ದ. ಕಸ್ಟಮ್ಸ್​ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದು, ಹೆಬ್ಬುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಟ್ಟಾಯಂನಿಂದ ಕೋರಿಯರ್ ಮೂಲಕ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​ ಸಾಗಿಸಲಾಗುತ್ತಿತ್ತು. ಸ್ಟ್ಯಾಂಪ್ ಮೇಲೆ ಗಣಪತಿ ಫೋಟೋ ಹಾಕಿ ಮಾರಾಟ ಮಾಡಲಾಗುತ್ತಿತ್ತು. ದೇವರ ಸ್ಟ್ಯಾಂಪ್ ಅಂದ್ರೆ ಅನುಮಾನ ಬರುವುದಿಲ್ಲ ಎಂದು ಖದೀಮರು ಖತರ್ನಾಕ್ ಐಡಿಯಾ ಮಾಡಿದ್ದರು. ಆದ್ರೆ ಬೆಂಗಳೂರಿನಲ್ಲಿ ಡ್ರಗ್ಸ್​​ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋರಿಯರ್ ಮತ್ತು ಪೋಸ್ಟ್‌ ಮೇಲೆ ಕಣ್ಣಿಟ್ಟಿದ್ದ ಕಸ್ಟಮ್ಸ್​​​​ ಅಧಿಕಾರಿಗಳು ಕೊನೆಗೂ ಈ ಚಾಲಾಕಿ ಗ್ಯಾಂಗ್​ಅನ್ನು ಹೆಡೆಮುರಿ ಕಟ್ಟಿದ್ದಾರೆ.

ಇನ್ನು ಒಂದು ಸ್ಟ್ಯಾಂಪ್ 4 ಸಾವಿರ ರೂ.ಗೆ ಮಾರಾಟವಾಗುತ್ತಿತ್ತು. ಒಟ್ಟು 400 ಕ್ಕೂ ಹೆಚ್ಚು ಸ್ಟ್ಯಾಂಪ್ ಬಂದಿದ್ದು, ಒಟ್ಟಾರೆ 15 ಲಕ್ಷ ರೂ. ಮಾಲ್ಯದ ಡ್ರಗ್ಸ್​​ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಈ ದಂಧೆ ಮಾಡುತ್ತಿದ್ದು, ಪಬ್ ಮತ್ತು ಶ್ರೀಮಂತರ ಪಾರ್ಟಿಗಳನ್ನೇ ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದ ವಿಚಾರವನ್ನು ಆರೋಪಿಗಳು ತನಿಖೆ ವೇಳೆ ತಿಳಿಸಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

1 day ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago