Featured

ದೇವರ ಫೋಟೋ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಗ್ಯಾಂಗ್​ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ.-vishwanews24

ಬೆಂಗಳೂರು: ಗಣಪತಿ ದೇವರ ಫೋಟೋ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಗ್ಯಾಂಗ್​ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ಅರುಣ್ ಆಂಥೋನಿ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಅಮಲ್‌ ಬೈಜು ಪರಾರಿಯಾಗಿದ್ದಾನೆ. ಅರುಣ್, ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿಯ ಸ್ಪರ್ಶ್ ಮತ್ತು ಹೆಲ್ತ್ ಸಿಟಿಯಲ್ಲಿ ಎಕ್ಸ್ ರೇ ಟೆಕ್ನಿಶಿಯನ್​ ಆಗಿ ಕೆಲಸ ಮಾಡುತ್ತಿದ್ದ. ಕಸ್ಟಮ್ಸ್​ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದು, ಹೆಬ್ಬುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಟ್ಟಾಯಂನಿಂದ ಕೋರಿಯರ್ ಮೂಲಕ ಸ್ಟ್ಯಾಂಪ್​ಗಳಲ್ಲಿ ಡ್ರಗ್ಸ್​ ಸಾಗಿಸಲಾಗುತ್ತಿತ್ತು. ಸ್ಟ್ಯಾಂಪ್ ಮೇಲೆ ಗಣಪತಿ ಫೋಟೋ ಹಾಕಿ ಮಾರಾಟ ಮಾಡಲಾಗುತ್ತಿತ್ತು. ದೇವರ ಸ್ಟ್ಯಾಂಪ್ ಅಂದ್ರೆ ಅನುಮಾನ ಬರುವುದಿಲ್ಲ ಎಂದು ಖದೀಮರು ಖತರ್ನಾಕ್ ಐಡಿಯಾ ಮಾಡಿದ್ದರು. ಆದ್ರೆ ಬೆಂಗಳೂರಿನಲ್ಲಿ ಡ್ರಗ್ಸ್​​ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋರಿಯರ್ ಮತ್ತು ಪೋಸ್ಟ್‌ ಮೇಲೆ ಕಣ್ಣಿಟ್ಟಿದ್ದ ಕಸ್ಟಮ್ಸ್​​​​ ಅಧಿಕಾರಿಗಳು ಕೊನೆಗೂ ಈ ಚಾಲಾಕಿ ಗ್ಯಾಂಗ್​ಅನ್ನು ಹೆಡೆಮುರಿ ಕಟ್ಟಿದ್ದಾರೆ.

ಇನ್ನು ಒಂದು ಸ್ಟ್ಯಾಂಪ್ 4 ಸಾವಿರ ರೂ.ಗೆ ಮಾರಾಟವಾಗುತ್ತಿತ್ತು. ಒಟ್ಟು 400 ಕ್ಕೂ ಹೆಚ್ಚು ಸ್ಟ್ಯಾಂಪ್ ಬಂದಿದ್ದು, ಒಟ್ಟಾರೆ 15 ಲಕ್ಷ ರೂ. ಮಾಲ್ಯದ ಡ್ರಗ್ಸ್​​ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಈ ದಂಧೆ ಮಾಡುತ್ತಿದ್ದು, ಪಬ್ ಮತ್ತು ಶ್ರೀಮಂತರ ಪಾರ್ಟಿಗಳನ್ನೇ ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದ ವಿಚಾರವನ್ನು ಆರೋಪಿಗಳು ತನಿಖೆ ವೇಳೆ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

4 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

4 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

6 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

7 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

7 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

8 hours ago