ಬೆಂಗಳೂರು: ಗಣಪತಿ ದೇವರ ಫೋಟೋ ಸ್ಟ್ಯಾಂಪ್ಗಳಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಗ್ಯಾಂಗ್ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ಅರುಣ್ ಆಂಥೋನಿ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಅಮಲ್ ಬೈಜು ಪರಾರಿಯಾಗಿದ್ದಾನೆ. ಅರುಣ್, ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿಯ ಸ್ಪರ್ಶ್ ಮತ್ತು ಹೆಲ್ತ್ ಸಿಟಿಯಲ್ಲಿ ಎಕ್ಸ್ ರೇ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದು, ಹೆಬ್ಬುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಟ್ಟಾಯಂನಿಂದ ಕೋರಿಯರ್ ಮೂಲಕ ಸ್ಟ್ಯಾಂಪ್ಗಳಲ್ಲಿ ಡ್ರಗ್ಸ್ ಸಾಗಿಸಲಾಗುತ್ತಿತ್ತು. ಸ್ಟ್ಯಾಂಪ್ ಮೇಲೆ ಗಣಪತಿ ಫೋಟೋ ಹಾಕಿ ಮಾರಾಟ ಮಾಡಲಾಗುತ್ತಿತ್ತು. ದೇವರ ಸ್ಟ್ಯಾಂಪ್ ಅಂದ್ರೆ ಅನುಮಾನ ಬರುವುದಿಲ್ಲ ಎಂದು ಖದೀಮರು ಖತರ್ನಾಕ್ ಐಡಿಯಾ ಮಾಡಿದ್ದರು. ಆದ್ರೆ ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋರಿಯರ್ ಮತ್ತು ಪೋಸ್ಟ್ ಮೇಲೆ ಕಣ್ಣಿಟ್ಟಿದ್ದ ಕಸ್ಟಮ್ಸ್ ಅಧಿಕಾರಿಗಳು ಕೊನೆಗೂ ಈ ಚಾಲಾಕಿ ಗ್ಯಾಂಗ್ಅನ್ನು ಹೆಡೆಮುರಿ ಕಟ್ಟಿದ್ದಾರೆ.
ಇನ್ನು ಒಂದು ಸ್ಟ್ಯಾಂಪ್ 4 ಸಾವಿರ ರೂ.ಗೆ ಮಾರಾಟವಾಗುತ್ತಿತ್ತು. ಒಟ್ಟು 400 ಕ್ಕೂ ಹೆಚ್ಚು ಸ್ಟ್ಯಾಂಪ್ ಬಂದಿದ್ದು, ಒಟ್ಟಾರೆ 15 ಲಕ್ಷ ರೂ. ಮಾಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಈ ದಂಧೆ ಮಾಡುತ್ತಿದ್ದು, ಪಬ್ ಮತ್ತು ಶ್ರೀಮಂತರ ಪಾರ್ಟಿಗಳನ್ನೇ ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದ ವಿಚಾರವನ್ನು ಆರೋಪಿಗಳು ತನಿಖೆ ವೇಳೆ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…