ಢಾಕಾ: ಬಾಂಗ್ಲಾದೇಶದ ನದಿಯೊಂದರಲ್ಲಿ ಪ್ರಯಾಣಿಕರು ಮತ್ತು ಸರಕುಗಳನ್ನು ಸಾಗಿಸುತ್ತಿದ್ದ ಹಡಗಿಗೆ ಬೆಂಕಿಹೊತ್ತಿಕೊಂಡ ಪರಿಣಾಮ ಸುಮಾರು 32 ಮಂದಿ ದುರ್ಮರಣಕ್ಕೀಡಾಗಿದ್ದಾರೆ.ಘಟನೆಯನ್ನು ಸುಮಾರು 200 ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು (ಡಿ.24) ನಸುಕಿನ ಜಾವ 3 ಗಂಟೆ ಸಮಯದಲ್ಲಿ ಬಾಂಗ್ಲಾದ ಬಾರ್ಗಾನ ಮೂಲದ ಎಂವಿ ಅಭಿಜಾನ್-10 ಹೆಸರಿನ ಪ್ರಯಾಣಿಕರ ಹಡಗಿನ ಇಂಜಿನ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬಳಿಕ ಬೆಂಕಿಯ ಜ್ವಾಲೆ ಹೆಚ್ಚಾಗಿ 36 ಮಂದಿಯನ್ನು ಬಲಿ ಪಡೆದುಕೊಂಡಿದೆ. ಹಡಗು ಢಾಕಾದಿಂದ ಪ್ರಯಾಣ ಬೆಳೆಸಿತ್ತು.
ಮೂರು ಮಹಡಿಯ ಹಡಗಿನಲ್ಲಿ ನದಿಯ ಮಧ್ಯಭಾಗದಲ್ಲಿ ಇದ್ದಾಗ ಬೆಂಕಿ ಹೊತ್ತಿಕೊಂಡಿತು. ಘಟನೆಯ ಬಳಿಕ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಈವರೆಗೆ 32 ಜನರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚಿನವರು ಬೆಂಕಿಯಿಂದ ಗಂಭೀರ ಸುಟ್ಟಗಾಯಗಳಾಗಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬೆಂಕಿಯಿಂದ ಸುಟ್ಟ ಗಾಯಗಳಾಗಿರುವುದರಿಂದ 100 ಮಂದಿಯನ್ನು ಪಕ್ಕದಲ್ಲಿರುವ ಬರಿಸಲಾನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ ಎಂದು ಹೇಳಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…