Featured

ತಂದೆಯನ್ನ ಕೊಂದು, ಕೊಡಲಿಯಿಂದ ತುಂಡು ಮಾಡಿ ಕೊಳವೆ ಬಾವಿಗೆ ಹಾಕಿದ ಮಗ : ಬಾಗಲಕೋಟೆಯಲ್ಲಿ ಭಯಾನಕ ಪ್ರಕರಣ – Vishwanews24

ತಂದೆಯನ್ನ ಕೊಂದು, ಕೊಡಲಿಯಿಂದ ತುಂಡು ಮಾಡಿ ಕೊಳವೆಬಾವಿಗೆ ಹಾಕಿದ ಮಗ : ಬಾಗಲಕೋಟೆಯಲ್ಲಿ ಭಯಾನಕ ಪ್ರಕರಣ

ಬಾಗಲಕೋಟೆ:  ಮುಂಬೈ ಯುವತಿ ಶ್ರದ್ಧಾಳ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಇಂತಹದ್ದೇ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ.

ನನ್ನ ಗಂಡ ಒಂದು ವಾರದಿಂದ ಕಾಣಿಸ್ತಿಲ್ಲ. ನನಗೆ ನನ್ನ ಮಗನ ಮೇಲೆ ಅನುಮಾನ ಇದೆ. ದಯವಿಟ್ಟು ತನಿಖೆ ಮಾಡಿ ಹುಡುಕಿಕೊಡಿ ಸರ್​… ಎಂದು ಮಹಿಳೆಯೊಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಮಗನನ್ನ ವಶಕ್ಕೆ ಪಡೆದು ತನಿಖೆ ಶುರು ಮಾಡುತ್ತಿದ್ದಂತೆ ಘೋರ ರಹಸ್ಯ ಬಯಲಾಗಿದೆ. ಜನ್ಮ ಕೊಟ್ಟ ತಂದೆಯನ್ನೇ ಕೊಂದು ಶವವನ್ನು ತುಂಡು ತುಂಡು ಮಾಡಿ ಕೊಳವೆಬಾವಿಗೆ ತುರುಕಿರುವುದಾಗಿ ಬಾಯ್ಬಿಟ್ಟಿದ್ದು, ಸ್ಥಳದಲ್ಲಿ ಮೃತದೇಹ ಪತ್ತೆ ಕಾರ್ಯಾಚರಣೆ ಮಂಗಳವಾರ ಬೆಳಗ್ಗೆಯಿಂದ ನಡೆಯುತ್ತಿದ್ದು, ಶವದ ತುಂಡುಗಳು ಪತ್ತೆಯಾಗುತ್ತಿವೆ.

ಮುಧೋಳ ನಗರದ ಪರಶುರಾಮ ಕುಳಲಿ(54) ಕೊಲೆಯಾದ ತಂದೆ. ಮಗ ವಿಠ್ಠಲ ಕುಳಲಿ(20) ಕೊಲೆ ಆರೋಪಿ. ಡಿ.6ರ ರಾತ್ರಿ 12 ಗಂಟೆಯಲ್ಲಿ ರಾಡ್​ನಿಂದ ಹಲ್ಲೆ ಮಾಡಿ ತಂದೆಯನ್ನು ಕೊಂದ ಮಗ, ಬಳಿಕ ಯಾರಿಗೂ ಅನುಮಾನ ಬಾರದಿರಲೆಂದು ಮೃತದೇಹವನ್ನು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ಇರುವ ತನ್ನ ಹೊಲಕ್ಕೆ ತೆಗೆದುಕೊಂಡು ಹೋಗಿದ್ದಾನೆ. ಮುಚ್ಚಿದರೆ ಗೊತ್ತಾಗಬಹುದೆಂದು, ಕೊಳವೆಬಾವಿಗೆ ಹಾಕಲು ಯತ್ನಿಸಿದ್ದಾನೆ. ದೇಹ ಒಳಗೆ ತೂರುತ್ತಿಲ್ಲ ಎಂದು ಶವವನ್ನು ಕೊಡಲಿಯಿಂದ ತುಂಡು ತಂಡು ಮಾಡಿ ಕೊಳವೆಬಾವಿಗೆ ಹಾಕಿದ್ದಾನೆ.

ಬಳಿಕ ಒಂದು ವಾರ ಏನೂ ಅರಿಯದಂತೆ ಊರಲ್ಲಿ ಓಡಾಡಿಕೊಂಡಿದ್ದ. ಅನುಮಾನಗೊಂಡ ತಾಯಿ, ಮುಧೋಳ ಠಾಣೆಯಲ್ಲಿ ಮಿಸ್ಸಿಂಗ್​ ಕೇಸ್​ ದಾಖಲಿಸಿದ್ದರು. ಪೊಲಿಸರು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾ ಸತ್ಯ ಬಾಯ್ಬಿಟ್ಟಿದ್ದಾನೆ. ಕುಡಿದ ಮತ್ತಲ್ಲಿ ನನ್ನ ತಂದೆ ನಿತ್ಯ ನನಗೆ ಹೊಡೆಯುತ್ತಿದ್ದ. ಅವಾಚ್ಯವಾಗಿ ಬೈಯ್ಯುತ್ತಿದ್ದ. ಅದಕ್ಕೆ ಸಿಟ್ಟಿನಲ್ಲಿ ರಾಡ್​ನಿಂದ ಹಲ್ಲೆ ಮಾಡಿದೆ. ಗಂಭೀರ ಗಾಯಗೊಂಡು ಮೃತಪಟ್ಟರು. ಪ್ರಕರಣ ಮುಚ್ಚಿಹಾಕಲು ಶವವನ್ನು ಜಮೀನಿಗೆ ತೆಗೆದುಕೊಂಡು ಹೋಗಿ ನಮ್ಮದೇ ಕೊಳವೆಬಾವಿಗೆ ಶವವನ್ನು ಸಣ್ಣ ಸಣ್ಣ ತುಂಡು ಮಾಡಿ ಹಾಕಿದೆ ಎಂದು ವಿವರಿಸಿದ್ದಾನೆ. ಜೆಸಿಬಿಯಿಂದ ಕೊಳವೆಬಾವಿ ಸುತ್ತ ಅಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ ಒಂದೆರಡು ತುಂಡುಗಳು ಪತ್ತೆಯಾಗಿವೆ. ಮಗನನ್ನು ಪೊಲೀಸರು ಬಂಧಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago