ಬಾಗಲಕೋಟೆ: ಮುಂಬೈ ಯುವತಿ ಶ್ರದ್ಧಾಳ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಇಂತಹದ್ದೇ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ.
ನನ್ನ ಗಂಡ ಒಂದು ವಾರದಿಂದ ಕಾಣಿಸ್ತಿಲ್ಲ. ನನಗೆ ನನ್ನ ಮಗನ ಮೇಲೆ ಅನುಮಾನ ಇದೆ. ದಯವಿಟ್ಟು ತನಿಖೆ ಮಾಡಿ ಹುಡುಕಿಕೊಡಿ ಸರ್… ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಮಗನನ್ನ ವಶಕ್ಕೆ ಪಡೆದು ತನಿಖೆ ಶುರು ಮಾಡುತ್ತಿದ್ದಂತೆ ಘೋರ ರಹಸ್ಯ ಬಯಲಾಗಿದೆ. ಜನ್ಮ ಕೊಟ್ಟ ತಂದೆಯನ್ನೇ ಕೊಂದು ಶವವನ್ನು ತುಂಡು ತುಂಡು ಮಾಡಿ ಕೊಳವೆಬಾವಿಗೆ ತುರುಕಿರುವುದಾಗಿ ಬಾಯ್ಬಿಟ್ಟಿದ್ದು, ಸ್ಥಳದಲ್ಲಿ ಮೃತದೇಹ ಪತ್ತೆ ಕಾರ್ಯಾಚರಣೆ ಮಂಗಳವಾರ ಬೆಳಗ್ಗೆಯಿಂದ ನಡೆಯುತ್ತಿದ್ದು, ಶವದ ತುಂಡುಗಳು ಪತ್ತೆಯಾಗುತ್ತಿವೆ.
ಮುಧೋಳ ನಗರದ ಪರಶುರಾಮ ಕುಳಲಿ(54) ಕೊಲೆಯಾದ ತಂದೆ. ಮಗ ವಿಠ್ಠಲ ಕುಳಲಿ(20) ಕೊಲೆ ಆರೋಪಿ. ಡಿ.6ರ ರಾತ್ರಿ 12 ಗಂಟೆಯಲ್ಲಿ ರಾಡ್ನಿಂದ ಹಲ್ಲೆ ಮಾಡಿ ತಂದೆಯನ್ನು ಕೊಂದ ಮಗ, ಬಳಿಕ ಯಾರಿಗೂ ಅನುಮಾನ ಬಾರದಿರಲೆಂದು ಮೃತದೇಹವನ್ನು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ಇರುವ ತನ್ನ ಹೊಲಕ್ಕೆ ತೆಗೆದುಕೊಂಡು ಹೋಗಿದ್ದಾನೆ. ಮುಚ್ಚಿದರೆ ಗೊತ್ತಾಗಬಹುದೆಂದು, ಕೊಳವೆಬಾವಿಗೆ ಹಾಕಲು ಯತ್ನಿಸಿದ್ದಾನೆ. ದೇಹ ಒಳಗೆ ತೂರುತ್ತಿಲ್ಲ ಎಂದು ಶವವನ್ನು ಕೊಡಲಿಯಿಂದ ತುಂಡು ತಂಡು ಮಾಡಿ ಕೊಳವೆಬಾವಿಗೆ ಹಾಕಿದ್ದಾನೆ.
ಬಳಿಕ ಒಂದು ವಾರ ಏನೂ ಅರಿಯದಂತೆ ಊರಲ್ಲಿ ಓಡಾಡಿಕೊಂಡಿದ್ದ. ಅನುಮಾನಗೊಂಡ ತಾಯಿ, ಮುಧೋಳ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಪೊಲಿಸರು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾ ಸತ್ಯ ಬಾಯ್ಬಿಟ್ಟಿದ್ದಾನೆ. ಕುಡಿದ ಮತ್ತಲ್ಲಿ ನನ್ನ ತಂದೆ ನಿತ್ಯ ನನಗೆ ಹೊಡೆಯುತ್ತಿದ್ದ. ಅವಾಚ್ಯವಾಗಿ ಬೈಯ್ಯುತ್ತಿದ್ದ. ಅದಕ್ಕೆ ಸಿಟ್ಟಿನಲ್ಲಿ ರಾಡ್ನಿಂದ ಹಲ್ಲೆ ಮಾಡಿದೆ. ಗಂಭೀರ ಗಾಯಗೊಂಡು ಮೃತಪಟ್ಟರು. ಪ್ರಕರಣ ಮುಚ್ಚಿಹಾಕಲು ಶವವನ್ನು ಜಮೀನಿಗೆ ತೆಗೆದುಕೊಂಡು ಹೋಗಿ ನಮ್ಮದೇ ಕೊಳವೆಬಾವಿಗೆ ಶವವನ್ನು ಸಣ್ಣ ಸಣ್ಣ ತುಂಡು ಮಾಡಿ ಹಾಕಿದೆ ಎಂದು ವಿವರಿಸಿದ್ದಾನೆ. ಜೆಸಿಬಿಯಿಂದ ಕೊಳವೆಬಾವಿ ಸುತ್ತ ಅಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ ಒಂದೆರಡು ತುಂಡುಗಳು ಪತ್ತೆಯಾಗಿವೆ. ಮಗನನ್ನು ಪೊಲೀಸರು ಬಂಧಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…