Featured

ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ : ಸೂರಜ್ ರೇವಣ್ಣ  – Vishwanews24

ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ : ಸೂರಜ್ ರೇವಣ್ಣ

ಹಾಸನ: ತಂದೆಯ ಮೇಲೆ ಸಾವಿರ ಕೇಸ್‌ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್ ರೇವಣ್ಣ  ಹೇಳಿದ್ದಾರೆ.

ತಂದೆ ರೇವಣ್ಣ  ಅವರ ಮೇಲೂ ಕೇಸ್ ದಾಖಲಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಹೊಳೆನರಸೀಪುರ ಪಟ್ಟಣದಲ್ಲಿ ಮಾತನಾಡಿದ ಅವರು, ರೇವಣ್ಣ ಅವರು ಏನೆಂದು ನಮ್ಮ ಜಿಲ್ಲೆಯ ಜನರಿಗೆ ಗೊತ್ತಿದೆ. ತಾಲೂಕಿನ ಜನರಿಗೆ ಗೊತ್ತಿದೆ. ಅಂತಹ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎನ್ನುವ ಮೂಲಕ ತಮ್ಮ ಕುಟುಂಬದ ವಿರುದ್ಧದ ಆರೋಪಗಳ ಬಗ್ಗೆ ಕಿಡಿ ಕಾರಿದರು.

ರಾಜಕೀಯ ದುರುದ್ದೇಶದಿಂದ ಯಾರು ಏನು ಬೇಕಾದರೂ ಮಾಡುತ್ತಾರೆ. ಜಿಲ್ಲೆಯ ರಾಜಕಾರಣದಲ್ಲಿ ರೇವಣ್ಣ ಅವರಿಗೆ ಪ್ರತಿರೋಧ ಅಥವಾ ಪ್ರತಿಸ್ಪರ್ಧಿ ಇಲ್ಲ. ಅವರ ರೀತಿ ರಾಜಕಾರಣ ಮಾಡಿದವರು ಇಲ್ಲ. ಅವರನ್ನು ಸಿಲುಕಿಸಬೇಕು, ದುರ್ಬಲ ಮಾಡಬೇಕು ಎಂದು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಹೇಳಿ ತಂದೆ ಪರ ಬ್ಯಾಟಿಂಗ್ ಮಾಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್  ಅವರನ್ನು ಕಳೆದ ಜನವರಿಯಲ್ಲಿ ಅನುದಾನದ ವಿಚಾರದ ಬಗ್ಗೆ ಭೇಟಿ ಮಾಡಿದ್ದೆ. ನಾನು ಈ ಜಿಲ್ಲೆಯ ಜನಪ್ರತಿನಿಧಿಯಾಗಿದ್ದೇನೆ. ನಾನು ಭೇಟಿಯಾಗಿದ್ದನ್ನು ನೀವೇ ಚಿತ್ರಿಕರಿಸಿದ್ದೀರಿ. ಒಂದೂವರೆ ತಿಂಗಳಿನಿಂದ ಚುನಾವಣೆ ಹಿನ್ನೆಲೆಯಲ್ಲಿ ಬ್ಯುಸಿ ಇದ್ದೆ. ಇವತ್ತಿನವರೆಗೂ ಬೆಂಗಳೂರಿಗೆ ಹೋಗಿಲ್ಲ. ಹಾಗಿದ್ದಾಗ ಡಿ.ಕೆ.ಶಿವಕುಮಾರ್ ಅವರನ್ನಾಗಲೀ, ಯಾವುದೇ ರಾಜಕಾರಣಿಯನ್ನು ಭೇಟಿ ಮಾಡುವ ಸಂದರ್ಭ ಹೇಗೆ ಬರಲಿದೆ ಎಂದು ಪ್ರಶ್ನಿಸಿದರು.

ನಮ್ಮ ಕ್ಷೇತ್ರ, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಹಿಂದೆ ಸೌಹಾರ್ದಯುತವಾಗಿ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದು ನಿಜ. ಆಗಲೂ ರೇವಣ್ಣ ಕುಟುಂಬ ಕಾಂಗ್ರೆಸ್‌ಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಸೃಷ್ಟಿ ಮಾಡಲಾಗಿತ್ತು. ಈ ಊಹಾಪೋಹಗಳನ್ನೆಲ್ಲಾ ಬಿಟ್ಟುಬಿಡಿ ಎಂದು ಮನವಿ ಮಾಡಿದರು.

ಲೋಕಸಭಾ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು ನೂರಕ್ಕೆ ನೂರು ಪರ್ಸೆಂಟ್‌ ಪ್ರಜ್ವಲ್‌ ರೇವಣ್ಣ  ಜಯಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

20 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago