ಕಲಬುರಗಿ: ತಂದೆ-ತಾಯಿ ನೆನಪಿಗಾಗಿ ಪುತ್ರನೋರ್ವ ಗುಡಿ ಕಟ್ಟಿಸಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಆಳಂದ ತಾಲೂಕಿನ ನೀರಗುಡಿ ಗ್ರಾಮದಲ್ಲಿ ಆಧುನಿಕ ಶ್ರವಣಕುಮಾರ ಎನಿಸಿಕೊಂಡಿದ್ದಾರೆ.
ತಂದೆ ವಿಶ್ವನಾಥ್ ಹಾಗೂ ತಾಯಿ ಲಕ್ಷ್ಮಿಬಾಯಿ ನಿಧನರಾದ ಹಿನ್ನೆಲೆ, ಅವರ ನೆನಪಿಗಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅಂದಾಜು 2 ಲಕ್ಷ ರು. ಖರ್ಚಿನಲ್ಲಿ ಹೆತ್ತವರ ಮೂರ್ತಿ ಪ್ರತಿಷ್ಠಾಪಿಸಿದ್ದು, ಗ್ರಾಮಸ್ಥರೆಲ್ಲರೂ ಪಾಲ್ಗೊಂಡು ಜನ್ಮದಾತರ ನೆನಪಿಗಾಗಿ ಮೂರ್ತಿ ಪ್ರತಿಷ್ಠಾಪಿಸಿದ ದಶರಥ ಪಾತ್ರೆ ಈ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಮೃತ ದಂಪತಿಗೆ ಮೂವರು ಗಂಡು ಮಕ್ಕಳು ಇದ್ದಾರೆ. ಪಾಲಕರ ಪುತ್ಥಳಿಗಳ ಸ್ಥಾಪನೆಗಾಗಿ ದಶರಥ 2 ಲಕ್ಷ ರು ವೆಚ್ಚ ಮಾಡಿದ್ದಾನೆ. ಜಗನ್ನಾಥ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದಾರೆ. ದಶರಥ ಪಾತ್ರೆ ಗ್ರಾಪಂ ಪಿಡಿಒ ಆಗಿದ್ದು, ಧನರಾಜ ಎಫ್ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದಂಪತಿ ತಮ್ಮ ಮಕ್ಕಳಿಗೆ ಉನ್ನತ ಸ್ಥಾನಮಾನ ದೊರೆಯುವಂತೆ ನೋಡಿಕೊಂಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬೆಳೆದ ಮಕ್ಕಳು ಅವರ ಸದಾಕಾಲ ನೆನಪಿಗಾಗಿ ತಂದೆ-ತಾಯಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ.
ತಂದೆ ವಿಶ್ವನಾಥ್ ಹಾಗೂ ತಾಯಿ ಲಕ್ಷ್ಮಿಬಾಯಿ ಸುಮಾರು ನಾಲ್ಕು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಇವರ ಪುಣ್ಯ ಸ್ಮರಣಾರ್ಥವಾಗಿ ಇಂದು ಗ್ರಾಮದಲ್ಲಿ ಗುಡಿ ಕಟ್ಟಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಮಹಾರಾಷ್ಟ್ರದ ಪಂಡರಾಪೂರದ ಶಿಲ್ಪಿಗಳಿಂದ ಮೂರ್ತಿ ಕೆತ್ತಿಸಿದ್ದ ಪುತ್ರ ದಶರಥ ಪಾತ್ರೆ, ತಂದೆ-ತಾಯಿಯ ನೆನಪಿಗಾಗಿ ಗುಡಿ ಕಟ್ಟಿಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ತನ್ನ ಈ ವಿಶಿಷ್ಟಕೆಲಸದಿಂದಾಗಿ ಜನಮನ ಸೆಳೆದಿದ್ದಾನೆ.
ಇದನ್ನೂ ಓದಿ :ಉಡುಪಿ: ಈ ಸಾಲಿನ ರಾಷ್ಟ್ರಪತಿ ವಿಶಿಷ್ಟ ಪೊಲೀಸ್ ಸೇವಾ ಪದಕಕ್ಕೆ ಎಎಸ್ಸೈ ಪ್ರಕಾಶ್ ಬ್ರಹ್ಮಾವರ ಆಯ್ಕೆ- Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…