ಕಲಬುರಗಿ: ತಂದೆ-ತಾಯಿ ನೆನಪಿಗಾಗಿ ಪುತ್ರನೋರ್ವ ಗುಡಿ ಕಟ್ಟಿಸಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಆಳಂದ ತಾಲೂಕಿನ ನೀರಗುಡಿ ಗ್ರಾಮದಲ್ಲಿ ಆಧುನಿಕ ಶ್ರವಣಕುಮಾರ ಎನಿಸಿಕೊಂಡಿದ್ದಾರೆ.
ತಂದೆ ವಿಶ್ವನಾಥ್ ಹಾಗೂ ತಾಯಿ ಲಕ್ಷ್ಮಿಬಾಯಿ ನಿಧನರಾದ ಹಿನ್ನೆಲೆ, ಅವರ ನೆನಪಿಗಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅಂದಾಜು 2 ಲಕ್ಷ ರು. ಖರ್ಚಿನಲ್ಲಿ ಹೆತ್ತವರ ಮೂರ್ತಿ ಪ್ರತಿಷ್ಠಾಪಿಸಿದ್ದು, ಗ್ರಾಮಸ್ಥರೆಲ್ಲರೂ ಪಾಲ್ಗೊಂಡು ಜನ್ಮದಾತರ ನೆನಪಿಗಾಗಿ ಮೂರ್ತಿ ಪ್ರತಿಷ್ಠಾಪಿಸಿದ ದಶರಥ ಪಾತ್ರೆ ಈ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಮೃತ ದಂಪತಿಗೆ ಮೂವರು ಗಂಡು ಮಕ್ಕಳು ಇದ್ದಾರೆ. ಪಾಲಕರ ಪುತ್ಥಳಿಗಳ ಸ್ಥಾಪನೆಗಾಗಿ ದಶರಥ 2 ಲಕ್ಷ ರು ವೆಚ್ಚ ಮಾಡಿದ್ದಾನೆ. ಜಗನ್ನಾಥ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದಾರೆ. ದಶರಥ ಪಾತ್ರೆ ಗ್ರಾಪಂ ಪಿಡಿಒ ಆಗಿದ್ದು, ಧನರಾಜ ಎಫ್ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದಂಪತಿ ತಮ್ಮ ಮಕ್ಕಳಿಗೆ ಉನ್ನತ ಸ್ಥಾನಮಾನ ದೊರೆಯುವಂತೆ ನೋಡಿಕೊಂಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬೆಳೆದ ಮಕ್ಕಳು ಅವರ ಸದಾಕಾಲ ನೆನಪಿಗಾಗಿ ತಂದೆ-ತಾಯಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ.
ತಂದೆ ವಿಶ್ವನಾಥ್ ಹಾಗೂ ತಾಯಿ ಲಕ್ಷ್ಮಿಬಾಯಿ ಸುಮಾರು ನಾಲ್ಕು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಇವರ ಪುಣ್ಯ ಸ್ಮರಣಾರ್ಥವಾಗಿ ಇಂದು ಗ್ರಾಮದಲ್ಲಿ ಗುಡಿ ಕಟ್ಟಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಮಹಾರಾಷ್ಟ್ರದ ಪಂಡರಾಪೂರದ ಶಿಲ್ಪಿಗಳಿಂದ ಮೂರ್ತಿ ಕೆತ್ತಿಸಿದ್ದ ಪುತ್ರ ದಶರಥ ಪಾತ್ರೆ, ತಂದೆ-ತಾಯಿಯ ನೆನಪಿಗಾಗಿ ಗುಡಿ ಕಟ್ಟಿಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ತನ್ನ ಈ ವಿಶಿಷ್ಟಕೆಲಸದಿಂದಾಗಿ ಜನಮನ ಸೆಳೆದಿದ್ದಾನೆ.
ಇದನ್ನೂ ಓದಿ :ಉಡುಪಿ: ಈ ಸಾಲಿನ ರಾಷ್ಟ್ರಪತಿ ವಿಶಿಷ್ಟ ಪೊಲೀಸ್ ಸೇವಾ ಪದಕಕ್ಕೆ ಎಎಸ್ಸೈ ಪ್ರಕಾಶ್ ಬ್ರಹ್ಮಾವರ ಆಯ್ಕೆ- Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…