ಉಡುಪಿ, : ಸರಕಾರಿ ಇಲಾಖೆಗಳು, ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳುಗಳನ್ನು ಯಾವುದೇ ಇಲಾಖೆಗಳು ಪಡೆಯಬಾರದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮದ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಉಡುಪಿ ಜಿಲ್ಲೆ ಇದರ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಂಬಾಕು ಕಂಪೆನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಉದ್ದೇಶದಿಂದ, ಸರಕಾರಿ ಸಂಸ್ಥೆಗಳೊಂದಿಗೆ ಸೇರಿ ಕಾರ್ಯಕ್ರಮಗಳ ಆಯೋಜಿಸುವ ಸಾಧ್ಯತೆಯಿದ್ದು, ಇದರಿಂದ ತಂಬಾಕು ಉತ್ಪನ್ನಗಳ ಬಳಕೆಗೆ ನಾವೇ ಸಹಕಾರ ನೀಡಿದಂತಾಗುತ್ತದೆ ಆದ್ದರಿಂದ ಎಲ್ಲಾ ಇಲಾಖೆಗಳು ತಂಬಾಕು ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳೊಂದಿಗೆ ಯಾವುದೇ ರೀತಿಯಲ್ಲಿ ನೆರವು ಅಥವಾ ಸಹಕಾರ ನೀಡದಂತೆ ತಿಳಿಸಿದ ಜಿಲ್ಲಾಧಿಕಾರಿ, ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮಗಳ ಕುರಿತಂತೆ ಎಲ್ಲಾ ಕಚೇರಿಗಳಲ್ಲಿ ಸೂಕ್ತ ಫಲಕಗಳನ್ನು ಅಳವಡಿಸುವಂತೆ ಸೂಚಿಸಿ, ಈ ಫಲಕಗಳನ್ನು ಆರೋಗ್ಯ ಇಲಾಖೆ ಮೂಲಕ ಪಡೆಯುವಂತೆ ತಿಳಿಸಿದರು..
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…