ನವದೆಹಲಿ: ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತರ ವೈದ್ಯಕೀಯ ವರದಿ ಇಂದು ಸರ್ಕಾರದ ಕೈ ಸೇರಲಿದ್ದು, ವರದಿ ಬಳಿಕ ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಆರಂಭಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಕ್ರಮಗಳ ಕೈಗೊಳ್ಳಲಾಗಿದೆ. ತಜ್ಞರೊಂದಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸಲಿದ್ದು, ಸಭೆ ಬಳಿಕ ಹೊಸ ಮಾರ್ಗಸೂಚಿಯನ್ನು ಸಿದ್ಧ ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಸಚಿವರು ವೈದ್ಯಕೀಯ ವರದಿ ಹಾಗೂ ಹೊಸ ಮಾರ್ಗಸೂಚಿಗಳೊಂದಿಗೆ ತಮ್ಮ ಬಳಿ ಬರುವಂತೆ ಹೇಳಿದ್ದಾರೆಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ ಆರೋಗ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ವೈದ್ಯಕೀಯ ವರದಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಇಂದು ಮಧ್ಯಾಹ್ನ ಆರೋಗ್ಯ ಸಚಿವರು ಹಾಗೂ ತಜ್ಞರೊಂದಿಗೆ ತುರ್ತು ಸಭೆ ಕರೆಯಲಾಗಿದೆ ಎಂದಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…