ನವದೆಹಲಿ: ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತರ ವೈದ್ಯಕೀಯ ವರದಿ ಇಂದು ಸರ್ಕಾರದ ಕೈ ಸೇರಲಿದ್ದು, ವರದಿ ಬಳಿಕ ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಆರಂಭಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಕ್ರಮಗಳ ಕೈಗೊಳ್ಳಲಾಗಿದೆ. ತಜ್ಞರೊಂದಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸಲಿದ್ದು, ಸಭೆ ಬಳಿಕ ಹೊಸ ಮಾರ್ಗಸೂಚಿಯನ್ನು ಸಿದ್ಧ ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಸಚಿವರು ವೈದ್ಯಕೀಯ ವರದಿ ಹಾಗೂ ಹೊಸ ಮಾರ್ಗಸೂಚಿಗಳೊಂದಿಗೆ ತಮ್ಮ ಬಳಿ ಬರುವಂತೆ ಹೇಳಿದ್ದಾರೆಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ ಆರೋಗ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ವೈದ್ಯಕೀಯ ವರದಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಇಂದು ಮಧ್ಯಾಹ್ನ ಆರೋಗ್ಯ ಸಚಿವರು ಹಾಗೂ ತಜ್ಞರೊಂದಿಗೆ ತುರ್ತು ಸಭೆ ಕರೆಯಲಾಗಿದೆ ಎಂದಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…