ಉಡುಪಿ

ತಡರಾತ್ರಿ ಬಿರುಗಾಳಿ ಮಳೆ ರೌದ್ರಾವತಾರ – ಉಡುಪಿ ಜನಜೀವನ ಅಸ್ತವ್ಯಸ್ಥ

ಉಡುಪಿ: ಭಾನುವಾರ ತಡರಾತ್ರಿ ಉಡುಪಿ ಜಿಲ್ಲೆಯಾದ್ಯಂತ ಸುರಿದ ಬಿರುಗಾಳಿ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಗೆ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿವೆ. ಭಾರೀ ಗಾಳಿಗೆ ವಿದ್ಯುತ್ ಕಂಬಗಳೂ ಬಿದ್ದಿದೆ. ಪರಿಣಾಮ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ.

ಶಿರಿಬೀಡು ಸಮೀಪ ಕೆಲವು ಮನೆಗಳಿಗೆ ನೀರು ನುಗ್ಗಿದೆ. ದೊಡ್ಡಣಗುಡ್ಡೆಯಲ್ಲಿ ನೂರಾರು ಮರಗಳು ರಸ್ತೆಗೆ ಬಿದ್ದಿದ್ದು ಇದರಿಂದ ಸಂಚಾರ ಅಸ್ತವ್ಯಸ್ಥಗೊಂಡಿದೆ. ತಡರಾತ್ರಿಯ ಬಿರುಗಾಳಿ ಮಳೆ ರೌದ್ರಾವತಾರ ತೋರಿತ್ತು. ಉಡುಪಿಯ ಜನತೆ ಬಂದ್ ಬಗ್ಗೆ ತಲೆ ಕೆಡಿಸಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಬಂದ್ ಗೆ ಜಿಲ್ಲಾ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದರೂ, ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದಿವೆ.

ಬ್ರಹ್ಮಗಿರಿ, ಅಂಬಾಗಿಲುವಿನಲ್ಲಿ ಮರಗಳು ಉರುಳಿದ್ದು, ಟ್ರಾನ್ಸ್ ಫಾರ್ಮರ್ ಕೂಡ ರಸ್ತೆಗೆ ಉರುಳಿದೆ. ನೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಿಲ್ಲೆಯಲ್ಲಿ ಉರುಳಿ ವಿದ್ಯುತ್ ವ್ಯತ್ಯಯವಾಗಿದೆ. ಮಳೆಯಿಂದ ಮೆಸ್ಕಾಂ ಸಿಬ್ಬಂದಿಗಳು ಪರದಾಟ ನಡೆಸುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago