ಉಡುಪಿ: ಭಾನುವಾರ ತಡರಾತ್ರಿ ಉಡುಪಿ ಜಿಲ್ಲೆಯಾದ್ಯಂತ ಸುರಿದ ಬಿರುಗಾಳಿ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಗೆ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿವೆ. ಭಾರೀ ಗಾಳಿಗೆ ವಿದ್ಯುತ್ ಕಂಬಗಳೂ ಬಿದ್ದಿದೆ. ಪರಿಣಾಮ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ.
ಶಿರಿಬೀಡು ಸಮೀಪ ಕೆಲವು ಮನೆಗಳಿಗೆ ನೀರು ನುಗ್ಗಿದೆ. ದೊಡ್ಡಣಗುಡ್ಡೆಯಲ್ಲಿ ನೂರಾರು ಮರಗಳು ರಸ್ತೆಗೆ ಬಿದ್ದಿದ್ದು ಇದರಿಂದ ಸಂಚಾರ ಅಸ್ತವ್ಯಸ್ಥಗೊಂಡಿದೆ. ತಡರಾತ್ರಿಯ ಬಿರುಗಾಳಿ ಮಳೆ ರೌದ್ರಾವತಾರ ತೋರಿತ್ತು. ಉಡುಪಿಯ ಜನತೆ ಬಂದ್ ಬಗ್ಗೆ ತಲೆ ಕೆಡಿಸಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಬಂದ್ ಗೆ ಜಿಲ್ಲಾ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದರೂ, ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದಿವೆ.
ಬ್ರಹ್ಮಗಿರಿ, ಅಂಬಾಗಿಲುವಿನಲ್ಲಿ ಮರಗಳು ಉರುಳಿದ್ದು, ಟ್ರಾನ್ಸ್ ಫಾರ್ಮರ್ ಕೂಡ ರಸ್ತೆಗೆ ಉರುಳಿದೆ. ನೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಿಲ್ಲೆಯಲ್ಲಿ ಉರುಳಿ ವಿದ್ಯುತ್ ವ್ಯತ್ಯಯವಾಗಿದೆ. ಮಳೆಯಿಂದ ಮೆಸ್ಕಾಂ ಸಿಬ್ಬಂದಿಗಳು ಪರದಾಟ ನಡೆಸುತ್ತಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…