ಹೈದರಾಬಾದ್: ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ (37) ದುರ್ಮರಣಕ್ಕೀಡಾಗಿದ್ದಾರೆ.
ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್ನ ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ.
ನಂದಿತಾ ಅವರು ತಮ್ಮ ಎಸ್ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎಕ್ಸ್ಪ್ರೆಸ್ವೇಯ ಎಡಭಾಗದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ನಂದಿತಾ ಅವರು ಫೆಬ್ರವರಿ 13 ರಂದು ಬಿಆರ್ಎಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮರ್ರಿಗುಡ ಜಂಕ್ಷನ್ನಲ್ಲಿ ಇದೇ ರೀತಿಯ ರಸ್ತೆ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದರು.
ಬಿಆರ್ಎಸ್ನ ಮಾಜಿ ಶಾಸಕ ದಿವಂಗತ ಜಿ ಸಾಯಣ್ಣ ಅವರ ಪುತ್ರಿಯಾಗಿರುವ ನಂದಿತಾ ಅವರು ಕಳೆದ ನವೆಂಬರ್ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಜಿ ವೆನ್ನೆಲ ಅವರನ್ನು ಸೋಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…