Featured

ತನ್ನನ್ನು ತಾನೇ ಮದುವೆಯಾದ ಮಹಿಳೆ ..!!

ಉಗಾಂಡ: ಆಕ್ಸ್‌ಫರ್ಡ್ ವಿದ್ಯಾರ್ಥಿನಿಯೊಬ್ಬಳು ವರನಿಲ್ಲದೇ ತನ್ನನ್ನು ತಾನೇ ಮದ್ವೆ ಮಾಡಿಕೊಂಡಿರುವ ಅಚ್ಚರಿಯ ಘಟನೆ ಉಗಾಂಡದಲ್ಲಿ ನಡೆದಿದೆ.

32 ವರ್ಷದ ಲುಲು ಜೆಮಿಮಾ ತನ್ನನ್ನು ತಾನೇ ವರಿಸಿಕೊಂಡ ವಧು. ಜೆಮಿಮಾ ಅಂತಿಮವಾಗಿ ಪೋಷಕರ ಒತ್ತಡದಿಂದ ಮದುವೆಯಾಗಲು ಒಪ್ಪಿಕೊಂಡರು. ಹಾಗಾಗಿ, ಆಗಸ್ಟ್ 27 ರಂದು ಉಗಾಂಡಾದ  ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಪೋಷಕರ ಒತ್ತಡಕ್ಕೆ ಮಣಿದು ಅವರು ತೋರಿಸಿದ ಹುಡುಗನ ಜೊತೆ ಮದುವೆಯಾಗುವ ನಿರ್ಧಾರವನ್ನು ಹೆಚ್ಚಿನ  ಹುಡುಗಿಯರು ತೆಗೆದುಕೊಳ್ಳುತ್ತಾರೆ. ಆಕ್ಸ್‌ಫ‌ರ್ಡ್‌ ವಿದ್ಯಾರ್ಥಿನಿಯಾಗಿ ರುವ ಉಗಾಂಡ ಮೂಲದ ಮಹಿಳೆ ಲುಲು ಜೆಮಿಮ್ಹಾ(32) ಕೂಡ ಪೋಷಕರ ಒತ್ತಡದಿಂದ ಮುಕ್ತಿಪಡೆಯಲು ಮದುವೆಯಾಗಿದ್ದಾರೆ.

ಆದರೆ ಇವರು ಮದುವೆಯಾಗಿರುವುದು ಪೋಷಕರು ತೋರಿಸಿದ ಹುಡುಗನನ್ನಲ್ಲ. ಬದಲಾಗಿ ಅವರನ್ನು ಅವರೇ ಮದುವೆಯಾಗಿದ್ದಾರೆ. ಇತ್ತೀಚೆಗೆ ಇವರ ಮದುವೆ ಸಮಾರಂಭ ನಡೆದಿದೆ.

ತಾನು 16ನೇ ವಯಸ್ಸಿನಲ್ಲಿದ್ದಾಗಿನಿಂದ ನನ್ನ ಪೋಷಕರು, ನನ್ನನ್ನು ಚೆನ್ನಾಗಿ ನೋಡಿಕೊಳ್ಳುವ ಹುಡುಗ ಸಿಗಬೇಕು, ನಾನು ಅವನನ್ನು ಮದುವೆಯಾಗಬೇಕು ಎಂದು ಬಯಸಿದ್ದರು. ನನ್ನನ್ನು ತುಂಬಾ ಪ್ರೀತಿಸುವ ವ್ಯಕ್ತಿ ನಾನೇ. ಆದ್ದರಿಂದ ನನ್ನನ್ನು ನಾನೇ ಮದುವೆಯಾಗಿದ್ದೇನೆ.  ಎಂದು ಲುಲು ಹೇಳಿದ್ದಾರೆ.

ಮದುವೆಗೆ ಲುಲು ಜೆಮಿಯಾ ಕೇವಲ 2.62 ಡಾಲರ್(194.97 ರೂ.) ಖರ್ಚು ಮಾಡಿದ್ದಾಳೆ. ಜೆಮಿಯಾ ಸಹೋದರ ಮದುವೆಯ ಕೇಕ್ ನೀಡಿದ್ದು, ಸ್ನೇಹಿತೆ ವಧುವಿನ ಡ್ರೆಸ್‍ನ್ನು ಬಾಡಿಗೆಗೆ ನೀಡಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ತಮ್ಮ ಖರ್ಚನ್ನು ತಾವೇ ನೀಡಿದ್ದಾರೆ ಎಂದು ಜೆಮಿಯಾ ಹೇಳಿದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

18 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

18 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

19 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

21 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

21 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

21 hours ago