Featured

ತನ್ನನ್ನು ತಾನೇ ಮದುವೆಯಾದ ಮಹಿಳೆ ..!!

ಉಗಾಂಡ: ಆಕ್ಸ್‌ಫರ್ಡ್ ವಿದ್ಯಾರ್ಥಿನಿಯೊಬ್ಬಳು ವರನಿಲ್ಲದೇ ತನ್ನನ್ನು ತಾನೇ ಮದ್ವೆ ಮಾಡಿಕೊಂಡಿರುವ ಅಚ್ಚರಿಯ ಘಟನೆ ಉಗಾಂಡದಲ್ಲಿ ನಡೆದಿದೆ.

32 ವರ್ಷದ ಲುಲು ಜೆಮಿಮಾ ತನ್ನನ್ನು ತಾನೇ ವರಿಸಿಕೊಂಡ ವಧು. ಜೆಮಿಮಾ ಅಂತಿಮವಾಗಿ ಪೋಷಕರ ಒತ್ತಡದಿಂದ ಮದುವೆಯಾಗಲು ಒಪ್ಪಿಕೊಂಡರು. ಹಾಗಾಗಿ, ಆಗಸ್ಟ್ 27 ರಂದು ಉಗಾಂಡಾದ  ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಪೋಷಕರ ಒತ್ತಡಕ್ಕೆ ಮಣಿದು ಅವರು ತೋರಿಸಿದ ಹುಡುಗನ ಜೊತೆ ಮದುವೆಯಾಗುವ ನಿರ್ಧಾರವನ್ನು ಹೆಚ್ಚಿನ  ಹುಡುಗಿಯರು ತೆಗೆದುಕೊಳ್ಳುತ್ತಾರೆ. ಆಕ್ಸ್‌ಫ‌ರ್ಡ್‌ ವಿದ್ಯಾರ್ಥಿನಿಯಾಗಿ ರುವ ಉಗಾಂಡ ಮೂಲದ ಮಹಿಳೆ ಲುಲು ಜೆಮಿಮ್ಹಾ(32) ಕೂಡ ಪೋಷಕರ ಒತ್ತಡದಿಂದ ಮುಕ್ತಿಪಡೆಯಲು ಮದುವೆಯಾಗಿದ್ದಾರೆ.

ಆದರೆ ಇವರು ಮದುವೆಯಾಗಿರುವುದು ಪೋಷಕರು ತೋರಿಸಿದ ಹುಡುಗನನ್ನಲ್ಲ. ಬದಲಾಗಿ ಅವರನ್ನು ಅವರೇ ಮದುವೆಯಾಗಿದ್ದಾರೆ. ಇತ್ತೀಚೆಗೆ ಇವರ ಮದುವೆ ಸಮಾರಂಭ ನಡೆದಿದೆ.

ತಾನು 16ನೇ ವಯಸ್ಸಿನಲ್ಲಿದ್ದಾಗಿನಿಂದ ನನ್ನ ಪೋಷಕರು, ನನ್ನನ್ನು ಚೆನ್ನಾಗಿ ನೋಡಿಕೊಳ್ಳುವ ಹುಡುಗ ಸಿಗಬೇಕು, ನಾನು ಅವನನ್ನು ಮದುವೆಯಾಗಬೇಕು ಎಂದು ಬಯಸಿದ್ದರು. ನನ್ನನ್ನು ತುಂಬಾ ಪ್ರೀತಿಸುವ ವ್ಯಕ್ತಿ ನಾನೇ. ಆದ್ದರಿಂದ ನನ್ನನ್ನು ನಾನೇ ಮದುವೆಯಾಗಿದ್ದೇನೆ.  ಎಂದು ಲುಲು ಹೇಳಿದ್ದಾರೆ.

ಮದುವೆಗೆ ಲುಲು ಜೆಮಿಯಾ ಕೇವಲ 2.62 ಡಾಲರ್(194.97 ರೂ.) ಖರ್ಚು ಮಾಡಿದ್ದಾಳೆ. ಜೆಮಿಯಾ ಸಹೋದರ ಮದುವೆಯ ಕೇಕ್ ನೀಡಿದ್ದು, ಸ್ನೇಹಿತೆ ವಧುವಿನ ಡ್ರೆಸ್‍ನ್ನು ಬಾಡಿಗೆಗೆ ನೀಡಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ತಮ್ಮ ಖರ್ಚನ್ನು ತಾವೇ ನೀಡಿದ್ದಾರೆ ಎಂದು ಜೆಮಿಯಾ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago