Featured

ತನ್ನನ್ನು ತಾನೇ ಮದುವೆಯಾದ ಮಹಿಳೆ ..!!

ಉಗಾಂಡ: ಆಕ್ಸ್‌ಫರ್ಡ್ ವಿದ್ಯಾರ್ಥಿನಿಯೊಬ್ಬಳು ವರನಿಲ್ಲದೇ ತನ್ನನ್ನು ತಾನೇ ಮದ್ವೆ ಮಾಡಿಕೊಂಡಿರುವ ಅಚ್ಚರಿಯ ಘಟನೆ ಉಗಾಂಡದಲ್ಲಿ ನಡೆದಿದೆ.

32 ವರ್ಷದ ಲುಲು ಜೆಮಿಮಾ ತನ್ನನ್ನು ತಾನೇ ವರಿಸಿಕೊಂಡ ವಧು. ಜೆಮಿಮಾ ಅಂತಿಮವಾಗಿ ಪೋಷಕರ ಒತ್ತಡದಿಂದ ಮದುವೆಯಾಗಲು ಒಪ್ಪಿಕೊಂಡರು. ಹಾಗಾಗಿ, ಆಗಸ್ಟ್ 27 ರಂದು ಉಗಾಂಡಾದ  ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಪೋಷಕರ ಒತ್ತಡಕ್ಕೆ ಮಣಿದು ಅವರು ತೋರಿಸಿದ ಹುಡುಗನ ಜೊತೆ ಮದುವೆಯಾಗುವ ನಿರ್ಧಾರವನ್ನು ಹೆಚ್ಚಿನ  ಹುಡುಗಿಯರು ತೆಗೆದುಕೊಳ್ಳುತ್ತಾರೆ. ಆಕ್ಸ್‌ಫ‌ರ್ಡ್‌ ವಿದ್ಯಾರ್ಥಿನಿಯಾಗಿ ರುವ ಉಗಾಂಡ ಮೂಲದ ಮಹಿಳೆ ಲುಲು ಜೆಮಿಮ್ಹಾ(32) ಕೂಡ ಪೋಷಕರ ಒತ್ತಡದಿಂದ ಮುಕ್ತಿಪಡೆಯಲು ಮದುವೆಯಾಗಿದ್ದಾರೆ.

ಆದರೆ ಇವರು ಮದುವೆಯಾಗಿರುವುದು ಪೋಷಕರು ತೋರಿಸಿದ ಹುಡುಗನನ್ನಲ್ಲ. ಬದಲಾಗಿ ಅವರನ್ನು ಅವರೇ ಮದುವೆಯಾಗಿದ್ದಾರೆ. ಇತ್ತೀಚೆಗೆ ಇವರ ಮದುವೆ ಸಮಾರಂಭ ನಡೆದಿದೆ.

ತಾನು 16ನೇ ವಯಸ್ಸಿನಲ್ಲಿದ್ದಾಗಿನಿಂದ ನನ್ನ ಪೋಷಕರು, ನನ್ನನ್ನು ಚೆನ್ನಾಗಿ ನೋಡಿಕೊಳ್ಳುವ ಹುಡುಗ ಸಿಗಬೇಕು, ನಾನು ಅವನನ್ನು ಮದುವೆಯಾಗಬೇಕು ಎಂದು ಬಯಸಿದ್ದರು. ನನ್ನನ್ನು ತುಂಬಾ ಪ್ರೀತಿಸುವ ವ್ಯಕ್ತಿ ನಾನೇ. ಆದ್ದರಿಂದ ನನ್ನನ್ನು ನಾನೇ ಮದುವೆಯಾಗಿದ್ದೇನೆ.  ಎಂದು ಲುಲು ಹೇಳಿದ್ದಾರೆ.

ಮದುವೆಗೆ ಲುಲು ಜೆಮಿಯಾ ಕೇವಲ 2.62 ಡಾಲರ್(194.97 ರೂ.) ಖರ್ಚು ಮಾಡಿದ್ದಾಳೆ. ಜೆಮಿಯಾ ಸಹೋದರ ಮದುವೆಯ ಕೇಕ್ ನೀಡಿದ್ದು, ಸ್ನೇಹಿತೆ ವಧುವಿನ ಡ್ರೆಸ್‍ನ್ನು ಬಾಡಿಗೆಗೆ ನೀಡಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ತಮ್ಮ ಖರ್ಚನ್ನು ತಾವೇ ನೀಡಿದ್ದಾರೆ ಎಂದು ಜೆಮಿಯಾ ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago