ತನ್ನ ಸ್ವಂತ ಖರ್ಚಿನಲ್ಲಿ 19 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ದೆಹಲಿ ಪ್ರವಾಸ ಮಾಡಿಸಿದ ಮುಖ್ಯಶಿಕ್ಷಕ -Vishwanews24

ಭೋಪಾಲ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮುಖ್ಯ ಶಿಕ್ಷಕರೊಬ್ಬರು ತನ್ನ ಸ್ವಂತ ಖರ್ಚಿನಲ್ಲಿ 19 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಪ್ರವಾಸ ಮಾಡಿಸಿದ್ದಾರೆ.

ಮುಖ್ಯಶಿಕ್ಷಕ ಕಿಶೋರ್ ವಿದ್ಯಾರ್ಥಿಗಳಿಗಾಗಿ ತಮ್ಮ ಉಳಿತಾಯದ ಹಣದಲ್ಲಿ 60 ಸಾವಿರ ರೂ. ಖರ್ಚು ಮಾಡಿದ್ದಾರೆ. ಜಿಲ್ಲೆಯ ಬಿಜೇಪುರ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಆರನೇ, ಏಳನೇ ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳು ಮೊದಲ ಬಾರಿಗೆ ಇಂದೋರ್ ವಿಮಾನ ನಿಲ್ದಾಣಕ್ಕೆ ತಲುಪಿದಾಗ ತುಂಬಾ ಸಂತೋಷಪಟ್ಟರು. ಇಂದೋರಿನಿಂದ ದೆಹಲಿಗೆ ಎರಡು ದಿನಗಳ ಕಾಲ ಪ್ರವಾಸ ಹೋಗಿದ್ದರು.

ಇದೇ ವೇಳೆ ಮುಖ್ಯಶಿಕ್ಷಕ ಕಿಶೋರ್ ಮಾತನಾಡಿ, 19 ವಿದ್ಯಾರ್ಥಿಗಳಲ್ಲಿ ಕೆಲವರು ಇದುವರೆಗೂ ರೈಲಿನಲ್ಲಿಯೂ ಹೋಗಿರಲಿಲ್ಲ. ಇವರು ವಿಮಾನದಲ್ಲಿ ಪ್ರವಾಸ ಮಾಡಬೇಕು ಎಂದು ಇದೂವರೆಗೂ ಯೋಚನೆ ಸಹ ಮಾಡಿರಲಿಲ್ಲ. ಹಾಗಾಗಿ ನಾನು ವಿದ್ಯಾರ್ಥಿಗಳಿಗೆ ವಿಮಾನದಲ್ಲೇ ದೆಹಲಿಗೆ ಕರೆದುಕೊಂಡು ನಿರ್ಧರಿಸಿದೆ. ಟಿಕೆಟ್‍ಗಳು ಅಗ್ಗವಾಗುವುದನ್ನು ನಾನು ಗಮನಿಸುತ್ತಿದ್ದೆ. ನಂತರ ಬೆಲೆ ಕಡಿಮೆಯಾದಾಗ ಮುಂಚಿತವಾಗಿ ಟಿಕೆಟ್ ಬುಕ್ ಮಾಡಿದೆ ಎಂದರು.

ಈ ಮೊದಲು ವಿದ್ಯಾರ್ಥಿಗಳನ್ನು ರೈಲಿನಲ್ಲಿ ಆಗ್ರಾಗೆ ಕರೆದುಕೊಂಡು ಹೋಗಿದ್ದೆ. ರೈಲಿನಲ್ಲಿ ಹಿಂತಿರುಗುವಾಗ ಉತ್ಸಾಹದಲ್ಲಿದ್ದ ವಿದ್ಯಾರ್ಥಿಗಳು ನಾವು ಮುಂದಿನ ಬಾರಿ ವಿಮಾನದಲ್ಲಿ ಹೋಗೋಣ ಎಂದರು. ಮಕ್ಕಳ ಈ ಮಾತು ಕೇಳಿ ಅವರನ್ನು ವಿಮಾನದಲ್ಲೇ ಪ್ರವಾಸಕ್ಕೆ ಕರೆದುಕೊಂಡು ಹೋಗೋಣ ಎಂದು ನಿರ್ಧರಿಸಿದೆ ಎಂದು ಕಿಶೋರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಮಾಡಿದ್ದು, ಈ ವೇಳೆ ಅವರು ಕುತುಬ್ ಮಿನಾರ್, ಸಂಸತ್ ಭವನ್ ಹಾಗೂ ಕೆಂಪು ಕೋಟೆ ಸೇರಿದಂತೆ ಹಲವು ಐತಿಹಾಸಿಕ ಸ್ಥಳಗಳನ್ನು ವೀಕ್ಷಣೆ ಮಾಡಿದ್ದಾರೆ. ವಿಮಾನದಲ್ಲಿ ಪ್ರವಾಸ ಮಾಡಿಸಿದ್ದಕ್ಕೆ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕನಿಗೆ ಧನ್ಯವಾದ ತಿಳಿಸಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago