ತನ್ನ ಸ್ವಂತ ಖರ್ಚಿನಲ್ಲಿ 19 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ದೆಹಲಿ ಪ್ರವಾಸ ಮಾಡಿಸಿದ ಮುಖ್ಯಶಿಕ್ಷಕ -Vishwanews24

ಭೋಪಾಲ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮುಖ್ಯ ಶಿಕ್ಷಕರೊಬ್ಬರು ತನ್ನ ಸ್ವಂತ ಖರ್ಚಿನಲ್ಲಿ 19 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಪ್ರವಾಸ ಮಾಡಿಸಿದ್ದಾರೆ.

ಮುಖ್ಯಶಿಕ್ಷಕ ಕಿಶೋರ್ ವಿದ್ಯಾರ್ಥಿಗಳಿಗಾಗಿ ತಮ್ಮ ಉಳಿತಾಯದ ಹಣದಲ್ಲಿ 60 ಸಾವಿರ ರೂ. ಖರ್ಚು ಮಾಡಿದ್ದಾರೆ. ಜಿಲ್ಲೆಯ ಬಿಜೇಪುರ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಆರನೇ, ಏಳನೇ ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳು ಮೊದಲ ಬಾರಿಗೆ ಇಂದೋರ್ ವಿಮಾನ ನಿಲ್ದಾಣಕ್ಕೆ ತಲುಪಿದಾಗ ತುಂಬಾ ಸಂತೋಷಪಟ್ಟರು. ಇಂದೋರಿನಿಂದ ದೆಹಲಿಗೆ ಎರಡು ದಿನಗಳ ಕಾಲ ಪ್ರವಾಸ ಹೋಗಿದ್ದರು.

ಇದೇ ವೇಳೆ ಮುಖ್ಯಶಿಕ್ಷಕ ಕಿಶೋರ್ ಮಾತನಾಡಿ, 19 ವಿದ್ಯಾರ್ಥಿಗಳಲ್ಲಿ ಕೆಲವರು ಇದುವರೆಗೂ ರೈಲಿನಲ್ಲಿಯೂ ಹೋಗಿರಲಿಲ್ಲ. ಇವರು ವಿಮಾನದಲ್ಲಿ ಪ್ರವಾಸ ಮಾಡಬೇಕು ಎಂದು ಇದೂವರೆಗೂ ಯೋಚನೆ ಸಹ ಮಾಡಿರಲಿಲ್ಲ. ಹಾಗಾಗಿ ನಾನು ವಿದ್ಯಾರ್ಥಿಗಳಿಗೆ ವಿಮಾನದಲ್ಲೇ ದೆಹಲಿಗೆ ಕರೆದುಕೊಂಡು ನಿರ್ಧರಿಸಿದೆ. ಟಿಕೆಟ್‍ಗಳು ಅಗ್ಗವಾಗುವುದನ್ನು ನಾನು ಗಮನಿಸುತ್ತಿದ್ದೆ. ನಂತರ ಬೆಲೆ ಕಡಿಮೆಯಾದಾಗ ಮುಂಚಿತವಾಗಿ ಟಿಕೆಟ್ ಬುಕ್ ಮಾಡಿದೆ ಎಂದರು.

ಈ ಮೊದಲು ವಿದ್ಯಾರ್ಥಿಗಳನ್ನು ರೈಲಿನಲ್ಲಿ ಆಗ್ರಾಗೆ ಕರೆದುಕೊಂಡು ಹೋಗಿದ್ದೆ. ರೈಲಿನಲ್ಲಿ ಹಿಂತಿರುಗುವಾಗ ಉತ್ಸಾಹದಲ್ಲಿದ್ದ ವಿದ್ಯಾರ್ಥಿಗಳು ನಾವು ಮುಂದಿನ ಬಾರಿ ವಿಮಾನದಲ್ಲಿ ಹೋಗೋಣ ಎಂದರು. ಮಕ್ಕಳ ಈ ಮಾತು ಕೇಳಿ ಅವರನ್ನು ವಿಮಾನದಲ್ಲೇ ಪ್ರವಾಸಕ್ಕೆ ಕರೆದುಕೊಂಡು ಹೋಗೋಣ ಎಂದು ನಿರ್ಧರಿಸಿದೆ ಎಂದು ಕಿಶೋರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಮಾಡಿದ್ದು, ಈ ವೇಳೆ ಅವರು ಕುತುಬ್ ಮಿನಾರ್, ಸಂಸತ್ ಭವನ್ ಹಾಗೂ ಕೆಂಪು ಕೋಟೆ ಸೇರಿದಂತೆ ಹಲವು ಐತಿಹಾಸಿಕ ಸ್ಥಳಗಳನ್ನು ವೀಕ್ಷಣೆ ಮಾಡಿದ್ದಾರೆ. ವಿಮಾನದಲ್ಲಿ ಪ್ರವಾಸ ಮಾಡಿಸಿದ್ದಕ್ಕೆ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕನಿಗೆ ಧನ್ಯವಾದ ತಿಳಿಸಿದ್ದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

18 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

18 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

18 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

21 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

21 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

21 hours ago