ತಪ್ಪಿದ ಕೈ ಟಿಕೆಟ್- ಮೊಯಿದ್ದೀನ್ ಬಾವಾ ಕಾಂಗ್ರೆಸ್ ಗೆ ರಾಜೀನಾಮೆ -ಜೆಡಿಎಸ್ ನಿಂದ  ಕಣಕ್ಕೆ – Vishwanews24

Featured, ದಕ್ಷಿಣ ಕನ್ನಡ

ತಪ್ಪಿದ ಕೈ ಟಿಕೆಟ್- ಮೊಯಿದ್ದೀನ್ ಬಾವಾ ಕಾಂಗ್ರೆಸ್’ಗೆ ಗುಡ್ ಬೈ –ಜೆಡಿಎಸ್ ನಿಂದ  ಕಣಕ್ಕೆ

ಮಂಗಳೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್‌ ಬಾವಾ ಅವರು ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಭಾವುಕರಾಗಿ ಮಾತನಾಡಿದ ಅವರು , ಕಾಂಗ್ರೆಸ್ ಪಕ್ಷದ ಸರ್ವೆಯಲ್ಲಿ ನನ್ನ ಪರ ಮತವಿದ್ದರೂ ಅದನ್ನು ನಗಣ್ಯ ಮಾಡಿ , ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ನ್ನು ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ, ನನ್ನನ್ನು ವೈರಿಯಂತೆ ಕಾಡಿದ್ದಂತೆ ಎಂದು ಎಂದು ಆರೋಪಿಸಿದ್ದಾರೆ.

Karnataka Polls ಜೆಡಿಎಸ್ ಗೆ ಮೊಯ್ದಿನ್ ಬಾವ: ಮಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ

ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ನೊಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಜೆಡಿಎಸ್‌ ಸೇರ್ಪಡೆಯಾಗುತ್ತಿದೆ. ಇಂದು ಮಧ್ಯಾಹ್ನ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಂತಿಮ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರಕ್ಕೆ ಇನಾಯತ್ ಆಲಿ – vishwanews24

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ ಪೈಪೋಟಿ‌ ಇತ್ತು. ಕೊನೆಗೂ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದ್ದು, ಇನಾಯತ್ ಅಲಿ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಶಾಸಕ ಬಾವ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.

Leave a Reply