Featured

ತಮಿಳಿನ ಜನಪ್ರಿಯ ನಟಿ ವಿಜೆ ಚಿತ್ರಾ ಶೂಟಿಂಗ್ ಮುಗಿಸಿ ಬಂದು ನೇಣಿಗೆ ಶರಣು -Vishwanews24

ತಮಿಳಿನ ಜನಪ್ರಿಯ ನಟಿ ವಿಜೆ ಚಿತ್ರಾ ಶೂಟಿಂಗ್ ಮುಗಿಸಿ ಬಂದು ನೇಣಿಗೆ ಶರಣು -Vishwanews24

ಚೆನ್ನೈ: ತಮಿಳು ಸೀರಿಯಲ್ ನಟಿ ವಿಜೆ ಚಿತ್ರಾ(28) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಚಾರ ಇಡೀ ಚಿತ್ರರಂಗಕ್ಕೆ ಆಘಾತ ತಂದಿದೆ.

ಚಿತ್ರಾ ಅವರು ಜನಪ್ರಿಯ ತಮಿಳು ಕಾರ್ಯಕ್ರಮ ಪಾಂಡಿಯನ್ ಸ್ಟೋರ್ಸ್ ನಲ್ಲಿ ಮುಲ್ಲೈ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ಇದೀಗ ಈಕೆಯ ಮೃತದೇಹ ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲಿನಲ್ಲಿ ನೇನು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿ ಇಂದು ಮುಂಜಾನೆ 2.30ರ ಸುಮಾರಿಗೆ ಹೋಟೆಲ್ ಗೆ ಮರಳಿದ್ದರು. ಚಿತ್ರಾ ಅವರು ಕೆಲವು ತಿಂಗಳ ಹಿಂದೆ ಉದ್ಯಮಿ ಹೇಮಂತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸದ್ಯ ಅವರ ಜೊತೆಯೇ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.

ಚಿತ್ರಾ ಅವರು ಕಾರ್ಯಕ್ರಮ ನಿರೂಪಕರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ತನ್ನ ಮುಲ್ಲೈ ಪಾತ್ರದ ಮೂಲಕ ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿದ್ದರು.

ಘಟನೆಯ ಬಗ್ಗೆ ನಜ್ರತ್‌‌‌ ಠಾಣೆಯ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಯುವ ಬರಹಗಾರ, ಸಂಭಾಷಣೆಕಾರ ಟಿ.ಜಿ. ನಂದೀಶ್ ಹೃದಯಾಘಾತದಿಂದ ನಿಧನ -vishwanews24

ಯುವ ಬರಹಗಾರ, ಸಂಭಾಷಣೆಕಾರ ಟಿ.ಜಿ. ನಂದೀಶ್ ಹೃದಯಾಘಾತದಿಂದ ನಿಧನ ತೀರ್ಥಹಳ್ಳಿ: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಂಭಾಷಣೆಕಾರರಾಗಿ ಹೆಸರು ಮಾಡಿದ್ದ…

46 minutes ago

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

15 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

15 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

23 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

23 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

24 hours ago