Featured

ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು , ಬೆದರಿಕೆಗಳಿಗೆ ಹೆದರುವುದಿಲ್ಲ : ಉದಯನಿಧಿ – Vishwanews24

ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು , ಬೆದರಿಕೆಗಳಿಗೆ ಹೆದರುವುದಿಲ್ಲ : ಉದಯನಿಧಿ

ಚೆನ್ನೈ,: ಅಯೋಧ್ಯೆಯ ಸ್ವಾಮೀಜಿಯೊಬ್ಬರು ತಮಗೆ ಜೀವ ಬೆದರಿಕೆ ಒಡ್ಡಿರುವ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್,ತಮಿಳಿಗಾಗಿ ರೈಲು ಹಳಿ ಮೇಲೆ ತಲೆ ಇಟ್ಟ ಕಲಾವಿದನ ಮೊಮ್ಮಗ ನಾನು. ಇದು ನಮಗೆ ಹೊಸದಲ್ಲ. ಈ ಎಲ್ಲಾ ಬೆದರಿಕೆಗಳಿಗೆ ನಾವು ಹೆದರುವವರಲ್ಲ ಎಂದು ಹೇಳಿದ್ದಾರೆ.

“ಸನಾತನ ಧರ್ಮ” ಕುರಿತು ಉದಯನಿಧಿ ನೀಡಿರುವ ಹೇಳಿಕೆಗೆ ಹಲವು ಹಿಂದೂ ಸ್ವಾಮೀಜಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ತಪಸ್ವಿ ಧವನಿ ದೇವಸ್ಥಾನದ ಪ್ರಧಾನ ಅರ್ಚಕ ಪರಮಹಂಸ ಆಚಾರ್ಯ ಜೀವ ಬೆದರಿಕೆ ಹಾಕಿದ್ದಾರೆ.

ಉದಯನಿಧಿ ತಲೆ ಕಡಿದು ತಂದುಕೊಟ್ಟವರಿಗೆ 10 ಕೋಟಿ ರೂ ಬಹುಮಾನವನ್ನು ನೀಡುತ್ತೇನೆ. ಯಾರೂ ಉದಯನಿಧಿನನ್ನು ಕೊಲ್ಲುವ ಧೈರ್ಯ ಮಾಡದಿದ್ದರೆ ನಾನೇ ಆತನನ್ನು ಪತ್ತೆ ಮಾಡಿ ಹತ್ಯೆ ಮಾಡುತ್ತೇನೆ ಎಂದು ಹೇಳಿದ್ದರು.

ಈ ಕುರಿತು ಕಾರ್ಯಕ್ರಮೊಂದರಲ್ಲಿ ಮಾತನಾಡಿದ ಉದಯನಿಧಿ, ಸ್ವಾಮೀಜಿ ಈ ಹಿಂದೆಯೂ ಕೂಡ ವಿವಾದಿತ ಹೇಳಿಕೆ ನೀಡಿದ್ದು,’ ಪಠಾಣ್’ ಚಿತ್ರಕ್ಕೆ ಸಂಬಂಧಿಸಿದಂತೆ ನಟ ಶಾರುಕ್ ಖಾನ್ ಅವರನ್ನು ಜೀವಂತ ಸುಡುತ್ತೇನೆ ಎಂದಿದ್ದರು.

ಪರಮಹಂಸ ಆಚಾರ್ಯ ಸನಾತನ (ಧರ್ಮ) ಬಗ್ಗೆ ಮಾತನಾಡಿದ್ದಕ್ಕಾಗಿ ನನ್ನ ತಲೆ ಬೋಳಿಸಲು 10 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ. ನನ್ನ ತಲೆಯನ್ನು ಬಾಚಲು 10 ರೂಪಾಯಿ ಬಾಚಣಿಗೆ ಸಾಕು” ಎಂದು ಅವರು ಬೆದರಿಕೆಯನ್ನು ಲಘುವಾಗಿ ಪರಿಗಣಿಸಿದ್ದಾರೆ.

ಈ ರೀತಿಯ ಬೆದರಿಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು ಎಂದು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯ ನಿಧಿ ಹೇಳಿದ್ದಾರೆ.

Vishwa News 24

Recent Posts

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 minutes ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

13 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

3 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago