ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಬಂದ್ ಗೆ ಕರೆ : ವಾಟಾಳ್ ನಾಗರಾಜ್ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಮಂಡ್ಯ : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪು ವಿರೋಧಿಸಿ ಸೋಮವಾರ ಕೆ.ಆರ್.ಎಸ್ ಆಣೆಕಟ್ಟಿಗೆ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಜ್ ಹೇಳಿದ್ದಾರೆ.

ಕಾವೇರಿ ನೀರು ಪ್ರಾಧಿಕಾರವು ಕೆ.ಆರ್.ಎಸ್ ನಲ್ಲಿ ಒಳಹರಿವು ಹೆಚ್ಚಿದರೆ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಒಳಹರಿವು ಹೆಚ್ಚಾದರೂ ತಮಿಳುನಾಡಿಗೆ ನೀರು ಬಿಡಬಾರದು. ನಮ್ಮ ಜನ ನೀರಿಲ್ಲದೇ ಸಂಕಷ್ಟದಲ್ಲಿ ಇದ್ದಾರೆ, ಹೀಗಿರುವಾಗ ಪ್ರಾಧಿಕಾರದ ತೀರ್ಪು ವೈಜ್ಞಾನಿಕ ಅಲ್ಲ. ತೀರ್ಪಿನ ಬಗ್ಗೆ ಪ್ರಾಧಿಕಾರ ಪುನರ್ ಪರಿಶೀಲಿಸಬೇಕು ಎಂದರು. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಬಂದ್ ಗೆ  ಕರೆ ಕೊಡ್ತೀವಿ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.