Featured

ತಮಿಳುನಾಡಿನಲ್ಲಿಅಣ್ಣಾಮಲೈ ಸಮ್ಮುಖದಲ್ಲಿ ಬಿಜೆಪಿ ಸೇರಿದ 15 ಮಾಜಿ ನಾಯಕರು – Vishwanews24

ತಮಿಳುನಾಡಿನಲ್ಲಿಅಣ್ಣಾಮಲೈ ಸಮ್ಮುಖದಲ್ಲಿ ಬಿಜೆಪಿ ಸೇರಿದ 15 ಮಾಜಿ ನಾಯಕರು

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಬಿಜೆಪಿಯ ಅಬ್ಬರ ಜೋರಾಗಿದ್ದು ಅದರ ಪರಿಣಾಮವಾಗಿ 15 ಮಾಜಿ ಶಾಸಕರು ಮತ್ತು ಓರ್ವ ಮಾಜಿ ಸಂಸದ ಇಂದು ಬಿಜೆಪಿ ಸೇರಿದರು.

ಇಂದು ದೆಹಲಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಸಮ್ಮುಖದಲ್ಲಿ ಎಲ್ಲಾ ನಾಯಕರು ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಶಾಸಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಪಕ್ಷದ ಶಾಲು ಹಾಕಿ ನಾಯಕರನ್ನು ಸ್ವಾಗತಿಸಿದರು. ಇದರೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ 370 ಮತ್ತು ಎನ್‌ಡಿಎ 400 ಸ್ಥಾನಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಯಕರನ್ನು ಸ್ವಾಗತಿಸಿದ ಅಣ್ಣಾಮಲೈ ಅವರು ಬಿಜೆಪಿಗೆ ಸೇರಿದ ಮಾಜಿ ನಾಯಕರು ಅನುಭವದ ಸಂಪತ್ತನ್ನೇ ಹೊತ್ತು ತಂದಿದ್ದಾರೆ ಜೊತೆಗೆ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಲು ಬಯಸುತ್ತಾರೆ ಎಂದು ಹೇಳಿದರು.

ಪಕ್ಷ ಸೇರಿದವರ ವಿವರ:
ಬಿಜೆಪಿ ಸೇರ್ಪಡೆಯಾದವರ ಪಟ್ಟಿ ಬಹಿರಂಗವಾಗಿದೆ.ಎಡಿಎಂಕೆ ಮಾಜಿ ಶಾಸಕ ಕೆ.ವಡಿವೇಲ್, ಚಾಲೆಂಜರ್ ದುರಾಸಾಮಿ, ಪಿ.ಎಸ್.ಕಂದಸಾಮಿ, ಆರ್.ಚಿನ್ನಸಾಮಿ, ಮಾಜಿ ಸಚಿವ ಗೋಮತಿ ಶ್ರೀವಾಸನ್, ವಿ.ಆರ್.ಜಯರಾಮನ್, ಎಸ್.ಎಂ.ವಾಸನ್, ಪಿ.ಎಸ್.ಅರುಳ್, ಎಸ್.ಗುರುನಾಥನ್, ಆರ್.ರಾಜೇಂದ್ರನ್, ಸೆಲ್ವಿ. ಮುರುಗೇಶನ್., ಎ ರೋಕಿಣಿ, ಕೆ ತಮಿಳಗನ್, ಎಸ್‌ಇ ವೆಂಕಟಾಚಲಂ, ಮುತ್ತು ಕೃಷ್ಣನ್ ಮತ್ತು ಡಿಎಂಕೆ ಮಾಜಿ ಸಂಸದ ವಿ ಕುಲಂದೈವೇಲು.

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ ಮಾಜಿ ಶಾಸಕರು ಮತ್ತು ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸೇರಿರುವುದು ದಕ್ಷಿಣದಲ್ಲಿ ಪಕ್ಷದ ಹೆಚ್ಚುತ್ತಿರುವ ವಿಶ್ವಾಸಾರ್ಹತೆಯನ್ನು ತೋರಿಸುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜೀವ್ ಚಂದಶೇಖರ್ ಸಂತಸ ವ್ಯಕ್ತಪಡಿಸಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಎಲ್ಲ ಮುಖಂಡರಿಗೆ ಭವ್ಯ ಸ್ವಾಗತ ಕೋರಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago