Featured

ತಮಿಳುನಾಡಿನಲ್ಲಿಅಣ್ಣಾಮಲೈ ಸಮ್ಮುಖದಲ್ಲಿ ಬಿಜೆಪಿ ಸೇರಿದ 15 ಮಾಜಿ ನಾಯಕರು – Vishwanews24

ತಮಿಳುನಾಡಿನಲ್ಲಿಅಣ್ಣಾಮಲೈ ಸಮ್ಮುಖದಲ್ಲಿ ಬಿಜೆಪಿ ಸೇರಿದ 15 ಮಾಜಿ ನಾಯಕರು

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಬಿಜೆಪಿಯ ಅಬ್ಬರ ಜೋರಾಗಿದ್ದು ಅದರ ಪರಿಣಾಮವಾಗಿ 15 ಮಾಜಿ ಶಾಸಕರು ಮತ್ತು ಓರ್ವ ಮಾಜಿ ಸಂಸದ ಇಂದು ಬಿಜೆಪಿ ಸೇರಿದರು.

ಇಂದು ದೆಹಲಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಸಮ್ಮುಖದಲ್ಲಿ ಎಲ್ಲಾ ನಾಯಕರು ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಶಾಸಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಪಕ್ಷದ ಶಾಲು ಹಾಕಿ ನಾಯಕರನ್ನು ಸ್ವಾಗತಿಸಿದರು. ಇದರೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ 370 ಮತ್ತು ಎನ್‌ಡಿಎ 400 ಸ್ಥಾನಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಯಕರನ್ನು ಸ್ವಾಗತಿಸಿದ ಅಣ್ಣಾಮಲೈ ಅವರು ಬಿಜೆಪಿಗೆ ಸೇರಿದ ಮಾಜಿ ನಾಯಕರು ಅನುಭವದ ಸಂಪತ್ತನ್ನೇ ಹೊತ್ತು ತಂದಿದ್ದಾರೆ ಜೊತೆಗೆ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಲು ಬಯಸುತ್ತಾರೆ ಎಂದು ಹೇಳಿದರು.

ಪಕ್ಷ ಸೇರಿದವರ ವಿವರ:
ಬಿಜೆಪಿ ಸೇರ್ಪಡೆಯಾದವರ ಪಟ್ಟಿ ಬಹಿರಂಗವಾಗಿದೆ.ಎಡಿಎಂಕೆ ಮಾಜಿ ಶಾಸಕ ಕೆ.ವಡಿವೇಲ್, ಚಾಲೆಂಜರ್ ದುರಾಸಾಮಿ, ಪಿ.ಎಸ್.ಕಂದಸಾಮಿ, ಆರ್.ಚಿನ್ನಸಾಮಿ, ಮಾಜಿ ಸಚಿವ ಗೋಮತಿ ಶ್ರೀವಾಸನ್, ವಿ.ಆರ್.ಜಯರಾಮನ್, ಎಸ್.ಎಂ.ವಾಸನ್, ಪಿ.ಎಸ್.ಅರುಳ್, ಎಸ್.ಗುರುನಾಥನ್, ಆರ್.ರಾಜೇಂದ್ರನ್, ಸೆಲ್ವಿ. ಮುರುಗೇಶನ್., ಎ ರೋಕಿಣಿ, ಕೆ ತಮಿಳಗನ್, ಎಸ್‌ಇ ವೆಂಕಟಾಚಲಂ, ಮುತ್ತು ಕೃಷ್ಣನ್ ಮತ್ತು ಡಿಎಂಕೆ ಮಾಜಿ ಸಂಸದ ವಿ ಕುಲಂದೈವೇಲು.

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ ಮಾಜಿ ಶಾಸಕರು ಮತ್ತು ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸೇರಿರುವುದು ದಕ್ಷಿಣದಲ್ಲಿ ಪಕ್ಷದ ಹೆಚ್ಚುತ್ತಿರುವ ವಿಶ್ವಾಸಾರ್ಹತೆಯನ್ನು ತೋರಿಸುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜೀವ್ ಚಂದಶೇಖರ್ ಸಂತಸ ವ್ಯಕ್ತಪಡಿಸಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಎಲ್ಲ ಮುಖಂಡರಿಗೆ ಭವ್ಯ ಸ್ವಾಗತ ಕೋರಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

26 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

39 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

58 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago