Featured

ತಮಿಳುನಾಡಿನಲ್ಲಿ ಘರ್ಜಿಸಿದ ‘ಗಜ’ ಚಂಡಮಾರುತ, ; 12 ಮಂದಿ ಬಲಿ , ಹಲವರು ಕಣ್ಮರೆ,

ನಾಗಪಟ್ಟಿಣಂ: ತೀವ್ರ ಪರಿಣಾಮ ಬೀರುವ ಗಜ ಚಂಡಮಾರುತ ತಮಿಳುನಾಡಿನ ತೀರ ದಾಟಿ ನಾಗಪಟ್ಟಣಂ ಮತ್ತು ಹತ್ತಿರದ ವೇದರಣ್ಣಿಯಂ ನಡುವೆ ಶುಕ್ರವಾರ ನಸುಕಿನ ಜಾವ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಬೀಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು ರಾಜ್ಯದ  ನಾಗಪಟ್ಟಣಂ, ಪುದುಕೊಟ್ಟೈ, ರಾಮನಾಥಪುರಂ ಮತ್ತು ತಿರುವಾರೂರು ಸೇರಿದಂತೆ 6 ಜಿಲ್ಲೆಗಳ ತಗ್ಗು ಪ್ರದೇಶಗಳಿಂದ ಸುಮಾರು 76,290 ಮಂದಿಯನ್ನು ರಕ್ಷಿಸಲಾಗಿದ್ದು ಅವರಿಗೆ ಸುಮಾರು 300 ಆಶ್ರಯ ತಾಣಗಳಲ್ಲಿ ಆಶ್ರಯ ಒದಗಿಸಲಾಗಿದೆ.

ಗಜ ಚಂಡಮಾರುತ ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಪ್ರಾಂತ್ಯಗಳ ಮೇಲೆ ಅಪ್ಪಳಿಸಿದ್ದು ಭಾರೀ ಮಳೆ ರೌದ್ರಾವತಾರದಿಂದ 12 ಜನರು ಬಲಿಯಾಗಿದ್ದು, ಹಲವಾರು ಮಂದಿ ಕಣ್ಮರೆಯಾಗಿದ್ದಾರೆ.  ಚಂಡಮಾರುತದ ಆರ್ಭಟಕ್ಕೆ ಎಂಟು ಜಿಲ್ಲೆಗಳ ಅನೇಕ ಮನೆಗಳಿಗೆ ಹಾನಿಯಾಗಿವೆ. ಅನೇಕ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಕೆಲವೆಡೆ ಮನೆಗಳು ಭಾಗಶಃ ಕುಸಿದಿವೆ. ಭೂ ಕುಸಿತದಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ತಗ್ಗು ಪ್ರದೇಶಗಳಿಂದ 82,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ನಾಗಪಟ್ಟಣಂ ಮತ್ತು ವೇದರಣ್ಣಿಯಂ ಮಧ್ಯೆ ತಮಿಳುನಾಡು ಮತ್ತು ಪುದುಚೆರಿ ತೀರವನ್ನು ಗಜ ಚಂಡಮಾರುತ ದಾಟಿದ್ದು ಗಂಟೆಗೆ 110 ಕಿಲೋ ಮೀಟರ್ ನಿಂದ 120 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹೇಳಿದೆ.ಚಂಡಮಾರುತ ಭೂ ಪ್ರದೇಶದ ಮಧ್ಯೆ ಕೇಂದ್ರೀಕೃತವಾಗಿದ್ದರೂ ಕೂಡ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಎಲ್ಲ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ನೆಲಮಟ್ಟಕ್ಕೆ ಕುಸಿದ ಬಳಿಕವೂ ಗಜ ಚಂಡಮಾರುತ ಪ್ರಭಾವ ಸ್ವಲ್ಪಮಟ್ಟಿಗೆ ಇರಲಿದ್ದು, 60 ರಿಂದ 70 ಕಿಲೋಮೀಟರ್ ವೇಗದಲ್ಲಿ ತಮಿಳುನಾಡಿನ ಒಳನಾಡು ಪ್ರದೇಶಗಳಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಂಡಮಾರುತ ಆರ್ಭಟದಿಂದ ಕೆಲವೆಡೆ ಸಾವು ನೋವು ಸಂಭವಿಸಿದ್ದು, ಈವರೆಗೆ ಎಂಟು ಜನ ಬಲಿಯಾಗಿ, ಅನೇಕರು ಗಾಯಗೊಂಡಿದ್ಧಾರೆ. ನಾಪತ್ತೆಯಾದವರಿಗಾಗಿ ಶೋಧ ಮುಂದುವರಿದಿದೆ. ಗಜ ಚಂಡಮಾರುತದ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಮಿಳುನಾಡಿನ ಎಂಟು ಜಿಲ್ಲೆಗಳ ತಗ್ಗು ಪ್ರದೇಶಗಳಲ್ಲಿ ಅಪಾಯದಲ್ಲಿ ಸಿಲುಕಿದ್ದ 82,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

11 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

12 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago