ಚೆನ್ನೈ : 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ರಣಾಂಗಣ ರಂಗೇರಿದೆ. ಇತ್ತ ಚುನಾವಣಾ ಪ್ರಚಾರ ಆರಂಭಿಸಿರುವ ಮಕ್ಕಳ್ ನೀಧಿ ಮೈಯ್ಸಮ್ ಮುಖಂಡ ನಟ ಕಮಲ್ ಹಾಸನ್ ಅವರ ಪ್ರಣಾಳಿಕೆ ಈಗ ಎಲ್ಲರ ಕುತೂಹಲ ಕೆರಳಿಸಿದೆ.
ಕಮಲ್ ಹಾಸನ್ ಅವರ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರವೇ ಇದ್ದು, ತಮ್ಮ ಪಕ್ಷ ಗೆದ್ದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕಮಲ್ ಅವರ ಈ ಘೋಷಣೆ ತಮಿಳುನಾಡು ಸೇರಿದಂತೆ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ.
ಚುನಾವಣೆ ಹಿನ್ನೆಲೆಯಲ್ಲಿ ಏಳು ಅಂಶಗಳುಳ್ಳ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಕಮಲ್ ಹಾಸನ್ ಬಿಡುಗಡೆ ಮಾಡಿದ್ದಾರೆ.ಅದರಲ್ಲಿ ಒಂದು ವೇಳೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಜಯಗಳಿಸಿದ್ರೆ ಮನೆಯ ಜವಾಬ್ದಾರಿ ನಿರ್ವಹಿಸುವ ಮಹಿಳೆಯರಿಗೂ ಭತ್ಯೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಇದಲ್ಲದೆ ಮನೆಯ ಎಲ್ಲಾ ಮಂದಿಗೆ ಕಂಪ್ಯೂಟರ್ ಜೊತೆ ಅತಿ ವೇಗದ ಇಂಟರ್ ನೆಟ್ ಆಶ್ವಾಸನೆ ನೀಡಿದ್ದಾರೆ.
ಇಷ್ಟು ವರ್ಷಗಳಿಂದ ಮಹಿಳೆಯರು ನಿತ್ಯದ ಅಗತ್ಯ ಮನೆಗೆಲಸಗಳನ್ನು ಮಾಡುತ್ತಿದ್ದರೂ ಅದನ್ನು ಸರಿಯಾಗಿ ಗುರುತಿಸಿ ಗೌರವಿಸಲಾಗಿಲ್ಲ. ಗೌರವಧನ ರೂಪದಲ್ಲಿ ವೇತನ ನೀಡುವ ಮೂಲಕ ಅವರಿಗೆ ಸಲ್ಲತಕ್ಕ ಘನತೆಯನ್ನು ಎಂಎನ್ಎಂ ಕೊಡಿಸಲಿದೆ. ಅಲ್ಲದೆ ಪ್ರತಿ ಮನೆಗೆ ಆಪ್ಟಿಕಲ್ ಫೈಬರ್ ಮೂಲಕ ಹೈಸ್ಪೀಡ್ ಅಂತರ್ಜಾಲವನ್ನು ಒದಗಿಸಲಾಗುವುದು. ಈ ಮೂಲಕ ಮಹಿಳಾ ಸಬಲೀಕರಣಕ್ಕೆ ತಮ್ಮ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಶ್ರಮಿಸಲಿದೆ,” ಎಂದು ಹಾಸನ್ ತಿಳಿಸಿದ್ದಾರೆ. ಒಟ್ಟು 7 ಸೂತ್ರಗಳ ಅಜೆಂಡಾಗಳನ್ನು ಹೊಂದಿರುವ ಅವರ ಘೋಷಣಾ ಪತ್ರದ ಜತೆಗೆ ಹಾಸನ್ ಅವರು ಉತ್ತರ ಭಾಗದ ತಮಿಳುನಾಡಿನಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದೊಂದು ಮಿನಿ ಪ್ರಣಾಳಿಕೆ ಇದ್ದಂತೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…