Featured

ತಮಿಳುನಾಡಿನಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ : ಕಮಲ್ ಹಾಸನ್ -Vishwanews24

ತಮಿಳುನಾಡಿನಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ : ಕಮಲ್ ಹಾಸನ್ -Vishwanews24

ಚೆನ್ನೈ : 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ರಣಾಂಗಣ ರಂಗೇರಿದೆ. ಇತ್ತ ಚುನಾವಣಾ ಪ್ರಚಾರ ಆರಂಭಿಸಿರುವ ಮಕ್ಕಳ್ ನೀಧಿ ಮೈಯ್ಸಮ್ ಮುಖಂಡ ನಟ ಕಮಲ್ ಹಾಸನ್ ಅವರ ಪ್ರಣಾಳಿಕೆ ಈಗ ಎಲ್ಲರ ಕುತೂಹಲ ಕೆರಳಿಸಿದೆ.

ಕಮಲ್ ಹಾಸನ್ ಅವರ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರವೇ ಇದ್ದು, ತಮ್ಮ ಪಕ್ಷ ಗೆದ್ದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕಮಲ್ ಅವರ ಈ ಘೋಷಣೆ ತಮಿಳುನಾಡು ಸೇರಿದಂತೆ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ.

ಚುನಾವಣೆ ಹಿನ್ನೆಲೆಯಲ್ಲಿ ಏಳು ಅಂಶಗಳುಳ್ಳ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಕಮಲ್ ಹಾಸನ್ ಬಿಡುಗಡೆ ಮಾಡಿದ್ದಾರೆ.ಅದರಲ್ಲಿ ಒಂದು ವೇಳೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಜಯಗಳಿಸಿದ್ರೆ ಮನೆಯ ಜವಾಬ್ದಾರಿ ನಿರ್ವಹಿಸುವ ಮಹಿಳೆಯರಿಗೂ ಭತ್ಯೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದಲ್ಲದೆ ಮನೆಯ ಎಲ್ಲಾ ಮಂದಿಗೆ ಕಂಪ್ಯೂಟರ್ ಜೊತೆ ಅತಿ ವೇಗದ ಇಂಟರ್ ನೆಟ್ ಆಶ್ವಾಸನೆ ನೀಡಿದ್ದಾರೆ.

ಇಷ್ಟು ವರ್ಷಗಳಿಂದ ಮಹಿಳೆಯರು ನಿತ್ಯದ ಅಗತ್ಯ ಮನೆಗೆಲಸಗಳನ್ನು ಮಾಡುತ್ತಿದ್ದರೂ ಅದನ್ನು ಸರಿಯಾಗಿ ಗುರುತಿಸಿ ಗೌರವಿಸಲಾಗಿಲ್ಲ. ಗೌರವಧನ ರೂಪದಲ್ಲಿ ವೇತನ ನೀಡುವ ಮೂಲಕ ಅವರಿಗೆ ಸಲ್ಲತಕ್ಕ ಘನತೆಯನ್ನು ಎಂಎನ್‌ಎಂ ಕೊಡಿಸಲಿದೆ. ಅಲ್ಲದೆ ಪ್ರತಿ ಮನೆಗೆ ಆಪ್ಟಿಕಲ್‌ ಫೈಬರ್‌ ಮೂಲಕ ಹೈಸ್ಪೀಡ್‌ ಅಂತರ್ಜಾಲವನ್ನು ಒದಗಿಸಲಾಗುವುದು. ಈ ಮೂಲಕ ಮಹಿಳಾ ಸಬಲೀಕರಣಕ್ಕೆ ತಮ್ಮ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಶ್ರಮಿಸಲಿದೆ,” ಎಂದು ಹಾಸನ್‌ ತಿಳಿಸಿದ್ದಾರೆ. ಒಟ್ಟು 7 ಸೂತ್ರಗಳ ಅಜೆಂಡಾಗಳನ್ನು ಹೊಂದಿರುವ ಅವರ ಘೋಷಣಾ ಪತ್ರದ ಜತೆಗೆ ಹಾಸನ್‌ ಅವರು ಉತ್ತರ ಭಾಗದ ತಮಿಳುನಾಡಿನಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದೊಂದು ಮಿನಿ ಪ್ರಣಾಳಿಕೆ ಇದ್ದಂತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago