Featured

ತಮಿಳುನಾಡಿನಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ : ಕಮಲ್ ಹಾಸನ್ -Vishwanews24

ತಮಿಳುನಾಡಿನಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ : ಕಮಲ್ ಹಾಸನ್ -Vishwanews24

ಚೆನ್ನೈ : 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ರಣಾಂಗಣ ರಂಗೇರಿದೆ. ಇತ್ತ ಚುನಾವಣಾ ಪ್ರಚಾರ ಆರಂಭಿಸಿರುವ ಮಕ್ಕಳ್ ನೀಧಿ ಮೈಯ್ಸಮ್ ಮುಖಂಡ ನಟ ಕಮಲ್ ಹಾಸನ್ ಅವರ ಪ್ರಣಾಳಿಕೆ ಈಗ ಎಲ್ಲರ ಕುತೂಹಲ ಕೆರಳಿಸಿದೆ.

ಕಮಲ್ ಹಾಸನ್ ಅವರ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರವೇ ಇದ್ದು, ತಮ್ಮ ಪಕ್ಷ ಗೆದ್ದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕಮಲ್ ಅವರ ಈ ಘೋಷಣೆ ತಮಿಳುನಾಡು ಸೇರಿದಂತೆ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ.

ಚುನಾವಣೆ ಹಿನ್ನೆಲೆಯಲ್ಲಿ ಏಳು ಅಂಶಗಳುಳ್ಳ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಕಮಲ್ ಹಾಸನ್ ಬಿಡುಗಡೆ ಮಾಡಿದ್ದಾರೆ.ಅದರಲ್ಲಿ ಒಂದು ವೇಳೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಜಯಗಳಿಸಿದ್ರೆ ಮನೆಯ ಜವಾಬ್ದಾರಿ ನಿರ್ವಹಿಸುವ ಮಹಿಳೆಯರಿಗೂ ಭತ್ಯೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದಲ್ಲದೆ ಮನೆಯ ಎಲ್ಲಾ ಮಂದಿಗೆ ಕಂಪ್ಯೂಟರ್ ಜೊತೆ ಅತಿ ವೇಗದ ಇಂಟರ್ ನೆಟ್ ಆಶ್ವಾಸನೆ ನೀಡಿದ್ದಾರೆ.

ಇಷ್ಟು ವರ್ಷಗಳಿಂದ ಮಹಿಳೆಯರು ನಿತ್ಯದ ಅಗತ್ಯ ಮನೆಗೆಲಸಗಳನ್ನು ಮಾಡುತ್ತಿದ್ದರೂ ಅದನ್ನು ಸರಿಯಾಗಿ ಗುರುತಿಸಿ ಗೌರವಿಸಲಾಗಿಲ್ಲ. ಗೌರವಧನ ರೂಪದಲ್ಲಿ ವೇತನ ನೀಡುವ ಮೂಲಕ ಅವರಿಗೆ ಸಲ್ಲತಕ್ಕ ಘನತೆಯನ್ನು ಎಂಎನ್‌ಎಂ ಕೊಡಿಸಲಿದೆ. ಅಲ್ಲದೆ ಪ್ರತಿ ಮನೆಗೆ ಆಪ್ಟಿಕಲ್‌ ಫೈಬರ್‌ ಮೂಲಕ ಹೈಸ್ಪೀಡ್‌ ಅಂತರ್ಜಾಲವನ್ನು ಒದಗಿಸಲಾಗುವುದು. ಈ ಮೂಲಕ ಮಹಿಳಾ ಸಬಲೀಕರಣಕ್ಕೆ ತಮ್ಮ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಶ್ರಮಿಸಲಿದೆ,” ಎಂದು ಹಾಸನ್‌ ತಿಳಿಸಿದ್ದಾರೆ. ಒಟ್ಟು 7 ಸೂತ್ರಗಳ ಅಜೆಂಡಾಗಳನ್ನು ಹೊಂದಿರುವ ಅವರ ಘೋಷಣಾ ಪತ್ರದ ಜತೆಗೆ ಹಾಸನ್‌ ಅವರು ಉತ್ತರ ಭಾಗದ ತಮಿಳುನಾಡಿನಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದೊಂದು ಮಿನಿ ಪ್ರಣಾಳಿಕೆ ಇದ್ದಂತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

10 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

10 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

11 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

11 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

15 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

15 hours ago