Featured

ತಮಿಳುನಾಡಿನಲ್ಲಿ ಮಳೆಯ ಆರ್ಭಟ : 20 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – Vishwanews24

ತಮಿಳುನಾಡಿನಲ್ಲಿ ಮಳೆಯ ಆರ್ಭಟ : 20 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – Vishwanews24

ಚೆನ್ನೈ: ಮುಂದಿನ ಮೂರು ಗಂಟೆಗಳಲ್ಲಿ ತಮಿಳುನಾಡಿನ ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆ ಇದೆ. ನವೆಂಬರ್ 11 ರ ಸಂಜೆಯ ವೇಳೆಗೆ ಹವಾಮಾನ ವ್ಯವಸ್ಥೆಯು ಉತ್ತರ ತಮಿಳುನಾಡು ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಕಾರೈಕಲ್ ಮತ್ತು ಶ್ರೀಹರಿಕೋಟಾ ನಡುವಿನ ಪುದುಚೇರಿಯನ್ನು ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡಿನ ಕಡಲೂರು, ಕಲ್ಲಕುರಿಚಿ, ವಿಲ್ಲುಪುರಂ, ರಾಣಿಪೇಟ್, ವೆಲ್ಲೂರು, ತಿರುವಣ್ಣಾಮಲೈ, ಕನ್ಯಾಕುಮಾರಿ, ತಿರುನೆಲ್ವೇಲಿ ಮತ್ತು ಥೆಂಕಾಸಿ ಜಿಲ್ಲೆಗಳಲ್ಲಿ ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಮುನ್ನ ಬುಧವಾರ ಸಹ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ಈ ಕುರಿತಂತೆ ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್‍ಎಸ್‍ಆರ್ ರಾಮಚಂದ್ರನ್ ಅವರು ರಾಜ್ಯದಲ್ಲಿ ಸುರಿದ ಮಳೆಯಿಂದಾಗಿ ಸಾವಿನ ಸಂಖ್ಯೆ 12 ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದರು.

ಇನ್ನೂ ಮೋಡಗಳಿರುವ ಕಾರಣ ಚೆನ್ನೈನಿಂದ ಪೂರ್ವ-ಆಗ್ನೇಯಕ್ಕೆ 430 ಕಿಲೋಮೀಟರ್ ಮತ್ತು ಪುದುಚೇರಿಯ ಪೂರ್ವ-ಆಗ್ನೇಯಕ್ಕೆ 420 ಕಿಮೀ ದೂರದಲ್ಲಿದ್ದು ಇದು ನವೆಂಬರ್ 11 ರ ಮುಂಜಾನೆ ಪಶ್ಚಿಮ ವಾಯವ್ಯ ದಿಕ್ಕಿನಲ್ಲಿ ಚಲಿಸಿ ಮತ್ತು ಉತ್ತರ ತಮಿಳುನಾಡು ಕರಾವಳಿಯ ಬಳಿ ತಲುಪುವ ಸಾಧ್ಯತೆಯಿದೆ. ನಂತರ ನವೆಂಬರ್ 11 ರ ಸಂಜೆಯ ವೇಳೆಗೆ ಇದು ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಹವಾಮಾನ ಮುನ್ಸೂಚನೆಯ ಹಿನ್ನೆಲ್ಲೇ ನವೆಂಬರ್ 11 ರಂದು ಚೆನ್ನೈ ಸೇರಿದಂತೆ ತಮಿಳುನಾಡಿನ 20 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆ ಬೆನ್ನಲ್ಲೇ ತಮಿಳುನಾಡು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಟಿಎನ್‍ಎಸ್‍ಡಿಎಂಎ) ತೂತುಕುಡಿ, ವಿಲ್ಲಿಪುರಂ, ತಿರುನೆಲ್ವೇಲಿ, ನಾಗಪಟ್ಟಿಣಂ, ಕಡಲೂರು ಮತ್ತು ಚೆಂಗಲ್‍ಪೆಟ್ಟು ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ ನೀಡಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

24 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago