ಚೆನ್ನೈ: ಮುಂದಿನ ಮೂರು ಗಂಟೆಗಳಲ್ಲಿ ತಮಿಳುನಾಡಿನ ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆ ಇದೆ. ನವೆಂಬರ್ 11 ರ ಸಂಜೆಯ ವೇಳೆಗೆ ಹವಾಮಾನ ವ್ಯವಸ್ಥೆಯು ಉತ್ತರ ತಮಿಳುನಾಡು ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಕಾರೈಕಲ್ ಮತ್ತು ಶ್ರೀಹರಿಕೋಟಾ ನಡುವಿನ ಪುದುಚೇರಿಯನ್ನು ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಿನ ಕಡಲೂರು, ಕಲ್ಲಕುರಿಚಿ, ವಿಲ್ಲುಪುರಂ, ರಾಣಿಪೇಟ್, ವೆಲ್ಲೂರು, ತಿರುವಣ್ಣಾಮಲೈ, ಕನ್ಯಾಕುಮಾರಿ, ತಿರುನೆಲ್ವೇಲಿ ಮತ್ತು ಥೆಂಕಾಸಿ ಜಿಲ್ಲೆಗಳಲ್ಲಿ ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಮುನ್ನ ಬುಧವಾರ ಸಹ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ಈ ಕುರಿತಂತೆ ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ಅವರು ರಾಜ್ಯದಲ್ಲಿ ಸುರಿದ ಮಳೆಯಿಂದಾಗಿ ಸಾವಿನ ಸಂಖ್ಯೆ 12 ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದರು.
ಇನ್ನೂ ಮೋಡಗಳಿರುವ ಕಾರಣ ಚೆನ್ನೈನಿಂದ ಪೂರ್ವ-ಆಗ್ನೇಯಕ್ಕೆ 430 ಕಿಲೋಮೀಟರ್ ಮತ್ತು ಪುದುಚೇರಿಯ ಪೂರ್ವ-ಆಗ್ನೇಯಕ್ಕೆ 420 ಕಿಮೀ ದೂರದಲ್ಲಿದ್ದು ಇದು ನವೆಂಬರ್ 11 ರ ಮುಂಜಾನೆ ಪಶ್ಚಿಮ ವಾಯವ್ಯ ದಿಕ್ಕಿನಲ್ಲಿ ಚಲಿಸಿ ಮತ್ತು ಉತ್ತರ ತಮಿಳುನಾಡು ಕರಾವಳಿಯ ಬಳಿ ತಲುಪುವ ಸಾಧ್ಯತೆಯಿದೆ. ನಂತರ ನವೆಂಬರ್ 11 ರ ಸಂಜೆಯ ವೇಳೆಗೆ ಇದು ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಹವಾಮಾನ ಮುನ್ಸೂಚನೆಯ ಹಿನ್ನೆಲ್ಲೇ ನವೆಂಬರ್ 11 ರಂದು ಚೆನ್ನೈ ಸೇರಿದಂತೆ ತಮಿಳುನಾಡಿನ 20 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆ ಬೆನ್ನಲ್ಲೇ ತಮಿಳುನಾಡು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಟಿಎನ್ಎಸ್ಡಿಎಂಎ) ತೂತುಕುಡಿ, ವಿಲ್ಲಿಪುರಂ, ತಿರುನೆಲ್ವೇಲಿ, ನಾಗಪಟ್ಟಿಣಂ, ಕಡಲೂರು ಮತ್ತು ಚೆಂಗಲ್ಪೆಟ್ಟು ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ ನೀಡಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…