ಬೆಂಗಳೂರು: “ತಮಿಳುನಾಡಿ ನಲ್ಲಿ ಟ್ರೈನಿಂಗ್ ಪಡೆದು ಬೆಂಗಳೂರಿಗೆ ಬಂದು ಬಾಂಬ್ ಇಡುತ್ತಾರೆ’ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯು ಸೋಷಿ ಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪ್ರತಿಪಕ್ಷ ನಾಯಕ ಪಳನಿಸ್ವಾಮಿ ಅವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ಹನುಮಾನ ಚಾಲೀಸಾ ಪ್ರಕರಣ ಸಂಬಂಧ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿ, ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದಾಗ ಶೋಭಾ ಅವರು, ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಉಲ್ಲೇಖೀಸಿ, ತಮಿಳುನಾಡು ವಿರುದ್ಧ ಆರೋಪ ಮಾಡಿದ್ದರು. ಈ ಹೇಳಿಕೆಯು ಆಕ್ರೋಶಕ್ಕೆ ಕಾರಣವಾಗುತ್ತಿ ದ್ದಂತೆ ಶೋಭಾ ಅವರು, “ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಕೋರುತ್ತೇನೆ’ ಮತ್ತೆ ಟ್ವೀಟ್ ಮಾಡಿದ್ದಾರೆ.
ತ.ನಾಡು ಸಿಎಂ ಹೇಳಿದ್ದೇನು?: “ಶೋಭಾ ಅವರ ಬೇಜವಾ ಬ್ದಾರಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬಿಜೆಪಿಯ ಈ ವಿಭಜನಕಾರಿ ಮಾತುಗಳನ್ನು ಕನ್ನಡಿಗರು ಮತ್ತು ತಮಿಳರು ಸಂಪೂರ್ಣವಾಗಿ ತಿರಸ್ಕರಿಸಲಿ ದ್ದಾರೆ. ಶಾಂತಿ, ಸೌಹಾರ್ದ ಮತ್ತು ರಾಷ್ಟ್ರೀಯ ಐಕ್ಯತೆಗೆ ಭಂಗ ಉಂಟು ಮಾಡುತ್ತಿರುವ ಶೋಭಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿ ಸುತ್ತೇನೆ. ಚುನಾವಣಾ ಆಯೋಗವು ಈ ದ್ವೇಷ ಭಾಷಣದ ಬಗ್ಗೆ ಕೂಡಲೇ ಗಮನ ಹರಿಸಿ, ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…