ಚೆನ್ನೈ: ತಮಿಳುನಾಡಿನಾದ್ಯಂತ ದೇವಸ್ಥಾನಗಳ ಒಳಭಾಗದಲ್ಲಿ ಮೊಬೈಲ್ ಫೋನ್ ಬಳಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.
ದೇವಾಲಯಗಳಿಗೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ಸಲುವಾಗಿ ಮೊಬೈಲ್ ಫೋನ್ ನಿಷೇಧಿಸಲು ಮುಂದಾಗಿದ್ದೇವೆ ಎಂದು ಕೋರ್ಟ್ ತಿಳಿಸಿದೆ.
ಇದನ್ನೂ ಓದಿ:
ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ ಸತ್ಯನಾರಾಯಣ ಪ್ರಸಾದ್ ಅವರ ವಿಭಾಗೀಯ ಪೀಠ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ನಿಷೇಧಿಸುವ ಮಹತ್ವದ ಆದೇಶ ನೀಡಿದೆ. ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಸೂಚಿಸಿದರು.
ಭಕ್ತಾಧಿಗಳಿಗೆ ಮೊಬೈಲ್ ಫೋನ್ ಬಳಕೆಯಿಂದಾಗಿ ಹಲವು ತೊಂದರೆಗಳು ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಮೊಬೈಲ್ಗಳನ್ನು ಸಮರ್ಪಕವಾಗಿ ಹೊರಗಿಟ್ಟು ಬರಲು ಭದ್ರತಾ ಲಾಕರ್ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.
ಇದನ್ನೂ ಓದಿ:
ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಫೋನ್ ಠೇವಣಿ ಲಾಕರ್ಗಳನ್ನು ಅಳವಡಿಸಬೇಕು. ಈ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ದೇವಾಲಯಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಬೇಕು ಎಂದು ಆದೇಶಿಸಿದೆ.
ಈಗಾಗಲೇ ಕೇರಳದ ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನ, ತಮಿಳುನಾಡಿನ ಮಧುರೈ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಮತ್ತು ಆಂಧ್ರಪ್ರದೇಶದ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನ ಸೇರಿದಂತೆ ಪ್ರಸಿದ್ಧ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧವನ್ನು ಜಾರಿಗೊಳಿಸಲಾಗಿದೆ. ಇದಲ್ಲದೇ ಮೊಬೈಲ್ ಡೆಪಾಸಿಟ್ ಮಾಡಲು ಭದ್ರತಾ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಅಳವಡಿಸಿಕೊಳ್ಳಿ. ದೇವಸ್ಥಾನದ ಆವರಣವನ್ನು ಪ್ರವೇಶಿಸುವ ಮೊದಲು ಫೋನ್ಗಳನ್ನು ಡೆಪಾಸಿಟ್ ಮಾಡುವಂತಹ ವ್ಯವಸ್ಥೆ ಮಾಡಿ ಎಂದು ಕೋರ್ಟ್ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…