ಚೆನ್ನೈ: ಸಿಎಂ ಸಿ. ಜೋಸೆಫ್ ವಿಜಯ್ ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ. ವರೆಗಿನ ಬೆಳೆ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಇದರೊಂದಿಗೆ 75,000 ರೂ.ಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ 35,000 ರೂ. ವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಪರಿಷ್ಕೃತ ಯೋಜನೆಯ ಪ್ರಕಾರ, 2025 ರ ಮೇ 1 ರಿಂದ 2026 ರ ಫೆ.28 ರ ನಡುವೆ ಸಹಕಾರಿ ಬ್ಯಾಂಕುಗಳಿಂದ 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಆಗಲಿದೆ. ರಾಜ್ಯಾದ್ಯಂತ ಸುಮಾರು 14.43 ಲಕ್ಷಕ್ಕೂ ಹೆಚ್ಚು ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ. ಆದ್ರೆ ಈ ಕ್ರಮದಿಂದ ಸರ್ಕಾರಕ್ಕೆ 5,932.23 ಕೋಟಿ ರೂ. ಹೊರೆಯಾಗಲಿದೆ. ಇದನ್ನೂ ಓದಿ: ಪ್ರಸಾದದ ಗುಣಮಟ್ಟ ಸುಧಾರಿಸಲು ಮೈಸೂರಿನ ಸಂಸ್ಥೆ ಜೊತೆ ಟಿಟಿಡಿ ಒಪ್ಪಂದ
ಯಾರಿಗೆ ಪ್ರಯೋಜನ?
* 8.33 ಲಕ್ಷ ಸಣ್ಣ ರೈತರು
*5.16 ಲಕ್ಷ ಮಧ್ಯಮ ರೈತರು
* 93,548 ಬೃಹತ್ ರೈತರಿಗೆ ಪ್ರಯೋಜನ
ಒಟ್ಟು ಫಲಾನುಭವಿಗಳಲ್ಲಿ 75,000 ರೂ.ವರೆಗಿನ ಸಾಲ ಹೊಂದಿರುವ 6.22 ಲಕ್ಷಕ್ಕೂ ಹೆಚ್ಚು ರೈತರು ಸಂಪೂರ್ಣ ಮನ್ನಾ ಪ್ರಯೋಜನ ಪಡೆಯುತ್ತಾರೆ. ಅದಕ್ಕಿಂತಲೂ ಹೆಚ್ಚಿನ ಸಾಲ ಹೊಂದಿದವರಲ್ಲಿ 8.21 ಲಕ್ಷ ರೈತರ ಸಾಲ ತಲಾ 35,000 ರೂ. ಮನ್ನಾ ಆಗಲಿದೆ. ಇದು ಸಿಎಂ ವಿಜಯ್ ಸರ್ಕಾರ ಇದುವೆರೆಗೆ ಘೋಷಿಸಿದ ಅತಿದೊಡ್ಡ ರೈತ ಕಲ್ಯಾಣ ಕಾರ್ಯಕ್ರಮಗಳಲ್ಲಿ ಒಂದಾಗಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…