ಚೆನ್ನೈ: ಸಿಎಂ ಸಿ. ಜೋಸೆಫ್ ವಿಜಯ್ ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ. ವರೆಗಿನ ಬೆಳೆ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಇದರೊಂದಿಗೆ 75,000 ರೂ.ಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ 35,000 ರೂ. ವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಪರಿಷ್ಕೃತ ಯೋಜನೆಯ ಪ್ರಕಾರ, 2025 ರ ಮೇ 1 ರಿಂದ 2026 ರ ಫೆ.28 ರ ನಡುವೆ ಸಹಕಾರಿ ಬ್ಯಾಂಕುಗಳಿಂದ 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಆಗಲಿದೆ. ರಾಜ್ಯಾದ್ಯಂತ ಸುಮಾರು 14.43 ಲಕ್ಷಕ್ಕೂ ಹೆಚ್ಚು ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ. ಆದ್ರೆ ಈ ಕ್ರಮದಿಂದ ಸರ್ಕಾರಕ್ಕೆ 5,932.23 ಕೋಟಿ ರೂ. ಹೊರೆಯಾಗಲಿದೆ. ಇದನ್ನೂ ಓದಿ: ಪ್ರಸಾದದ ಗುಣಮಟ್ಟ ಸುಧಾರಿಸಲು ಮೈಸೂರಿನ ಸಂಸ್ಥೆ ಜೊತೆ ಟಿಟಿಡಿ ಒಪ್ಪಂದ
ಯಾರಿಗೆ ಪ್ರಯೋಜನ?
* 8.33 ಲಕ್ಷ ಸಣ್ಣ ರೈತರು
*5.16 ಲಕ್ಷ ಮಧ್ಯಮ ರೈತರು
* 93,548 ಬೃಹತ್ ರೈತರಿಗೆ ಪ್ರಯೋಜನ
ಒಟ್ಟು ಫಲಾನುಭವಿಗಳಲ್ಲಿ 75,000 ರೂ.ವರೆಗಿನ ಸಾಲ ಹೊಂದಿರುವ 6.22 ಲಕ್ಷಕ್ಕೂ ಹೆಚ್ಚು ರೈತರು ಸಂಪೂರ್ಣ ಮನ್ನಾ ಪ್ರಯೋಜನ ಪಡೆಯುತ್ತಾರೆ. ಅದಕ್ಕಿಂತಲೂ ಹೆಚ್ಚಿನ ಸಾಲ ಹೊಂದಿದವರಲ್ಲಿ 8.21 ಲಕ್ಷ ರೈತರ ಸಾಲ ತಲಾ 35,000 ರೂ. ಮನ್ನಾ ಆಗಲಿದೆ. ಇದು ಸಿಎಂ ವಿಜಯ್ ಸರ್ಕಾರ ಇದುವೆರೆಗೆ ಘೋಷಿಸಿದ ಅತಿದೊಡ್ಡ ರೈತ ಕಲ್ಯಾಣ ಕಾರ್ಯಕ್ರಮಗಳಲ್ಲಿ ಒಂದಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…