ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಸೇರಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಲಕುರಿಚಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬಳು ತನ್ನ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದಕ್ಕೆ ಶಿಕ್ಷಕರ ಚಿತ್ರಹಿಂಸೆಯೇ ಕಾರಣ ಎಂದು ಆರೋಪಿಸಿದ ಡೆತ್ನೋಟ್ ಪತ್ತೆಯಾಗಿತ್ತು. ಮರೋಣತ್ತರ ಪರೀಕ್ಷೆಯಲ್ಲೂ ಹಲವು ಗಾಯದ ಗುರುತುಗಳು, ರಕ್ತಸ್ರಾವ ಆಗಿರುವುದು ಕಂಡುಬಂದಿತ್ತು ಎಂದು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಲೆಯ ರಸಾಯನಶಾಸ್ತ್ರ ಶಿಕ್ಷಕಿ ಹರಿಪ್ರಿಯಾ ಹಾಗೂ ಗಣಿತ ಶಿಕ್ಷಕಿ ಕೃತಿಕಾ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಶಾಲಾ ಪ್ರಾಂಶುಪಾಲರು, ಕಾರ್ಯದರ್ಶಿ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಏನು?
ಚಿನ್ನ ಸೇಲಂ ಸಮೀಪದ ಕಣಿಯಮೂರ್ನಲ್ಲಿರುವ ವಸತಿ ಶಾಲೆಯ ಹಾಸ್ಟೆಲ್ನಲ್ಲಿ ಬುಧವಾರ, 12ನೇ ತರಗತಿ ಶವವಾಗಿ ಪತ್ತೆಯಾಗಿದ್ದಳು. ಶಾಲೆಯ ಆಡಳಿತಾಧಿಕಾರಿಗಳು ಸಾವಿನ ಕುರಿತು ಮಾಹಿತಿ ನೀಡಿದ ಬಳಿಕ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಲ್ಲಕುರಿಚಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದರು. ಶಾಲೆಯ ಶಿಕ್ಷಕರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಉಲ್ಲೇಖಿಸಿರುವ ಸೂಸೈಡ್ ನೋಟ್ ಸಹ ಪತ್ತೆಯಾಗಿತ್ತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…