Featured

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ – vishwanews24

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ

ಚೆನ್ನೈ: ಬಹುಭಾಷಾ ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಖುಷ್ಬೂ ಸುಂದರ್, “ನನಗೆ ನಿಜಕ್ಕೂ ತುಂಬಾ ಸಂತೋಷವಾಗಿದೆ” ಎಂದು ತಮ್ಮ ನೇಮಕ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ. ತನ್ನ ಮೇಲೆ ನಂಬಿಕೆ ಇರಿಸಿ, ಈ ಹುದ್ದೆ ನೀಡಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

“ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ, ವಿಶೇಷವಾಗಿ ನಾಲ್ವರು ಉಪಾಧ್ಯಕ್ಷರ ಮೇಲ್ವಿಚಾರಣೆಯಲ್ಲಿರುವ ದಕ್ಷಿಣ ಚೆನ್ನೈ ಅನ್ನು ಗುರಿಯಾಗಿಸಿಕೊಂಡು ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಹಂತದಲ್ಲಿ ಪಕ್ಷದ ಉಪಸ್ಥಿತಿಯನ್ನು ಬಲಿಷ್ಠಗೊಳಿಸುವುದು ನನ್ನ ತಕ್ಷಣದ ಆದ್ಯತೆಯಾಗಿದೆ. ನಮಗೆಷ್ಟು ಸಾಧ್ಯವೊ ಅಷ್ಟು ಜನರನ್ನು, ಸಾರ್ವಜನಿಕರನ್ನು ಹಾಗೂ ಮತದಾರರನ್ನು ತಲುಪಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಒಳಿತಿನ ಕುರಿತು ಮನವರಿಕೆ ಮಾಡಲು ಮತದಾರರನ್ನು ನೇರವಾಗಿ ಭೇಟಿ ಮಾಡಲು ಬಹುಶಃ ಮನೆ ಮನೆ ಅಭಿಯಾನ ನಡೆಸಬೇಕಾಗಿದೆ. ಪ್ರಧಾನಿ ಹಾಗೂ ಬಿಜೆಪಿ ದೇಶಕ್ಕೆ ಎಷ್ಟು ಒಳಿತನ್ನು ಮಾಡಿದೆ ಹಾಗೂ ಅವರಿಂದ ತಮಿಳುನಾಡಿನ ಮತದಾರರ ಜೀವನ ಶೈಲಿ ಹೇಗೆ ಸುಧಾರಿಸಲಿದೆ ಎಂಬುದರ ಕುರಿತು ಅರಿವು ಮೂಡಿಸಬೇಕಿದೆ” ಎಂದು ಅವರು ತಮ್ಮ ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡಿದ್ದಾರೆ.

ಎಐಎಡಿಎಂಕೆಯೊಂದಿಗಿನ ಮೈತ್ರಿ ಕುರಿತೂ ತಮ್ಮ ಅನಿಸಿಕೆ ಹಂಚಿಕೊಂಡಿರುವ ಖುಷ್ಬೂ ಸುಂದರ್, “ಎರಡೂ ಪಕ್ಷಗಳ ನಡುವೆ ಮೊದಲಿನಿಂದಲೂ ಸೌಹಾರ್ದ ಸಂಬಂಧವಿದೆ. ಚುನಾವಣೆಗಳಲ್ಲಿ ಹೋರಾಡಲು ನಮಗೆ ಎಐಎಡಿಎಂಕೆಯಂತಹ ಮೈತ್ರಿ ಪಕ್ಷ ಇದೆ ಎಂಬುದು ಸಂತಸದ ವಿಚಾರವಾಗಿದೆ. ಉಳಿದ ವಿಚಾರಗಳ ಕುರಿತು ಪಕ್ಷದ ಮುಖಂಡರು ಹಾಗೂ ಹಿರಿಯ ನಾಯಕರು ಮಾತುಕತೆ ನಡೆಸಿ, ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago