Featured

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ – vishwanews24

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ

ಚೆನ್ನೈ: ಬಹುಭಾಷಾ ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಖುಷ್ಬೂ ಸುಂದರ್, “ನನಗೆ ನಿಜಕ್ಕೂ ತುಂಬಾ ಸಂತೋಷವಾಗಿದೆ” ಎಂದು ತಮ್ಮ ನೇಮಕ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ. ತನ್ನ ಮೇಲೆ ನಂಬಿಕೆ ಇರಿಸಿ, ಈ ಹುದ್ದೆ ನೀಡಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

“ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ, ವಿಶೇಷವಾಗಿ ನಾಲ್ವರು ಉಪಾಧ್ಯಕ್ಷರ ಮೇಲ್ವಿಚಾರಣೆಯಲ್ಲಿರುವ ದಕ್ಷಿಣ ಚೆನ್ನೈ ಅನ್ನು ಗುರಿಯಾಗಿಸಿಕೊಂಡು ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಹಂತದಲ್ಲಿ ಪಕ್ಷದ ಉಪಸ್ಥಿತಿಯನ್ನು ಬಲಿಷ್ಠಗೊಳಿಸುವುದು ನನ್ನ ತಕ್ಷಣದ ಆದ್ಯತೆಯಾಗಿದೆ. ನಮಗೆಷ್ಟು ಸಾಧ್ಯವೊ ಅಷ್ಟು ಜನರನ್ನು, ಸಾರ್ವಜನಿಕರನ್ನು ಹಾಗೂ ಮತದಾರರನ್ನು ತಲುಪಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಒಳಿತಿನ ಕುರಿತು ಮನವರಿಕೆ ಮಾಡಲು ಮತದಾರರನ್ನು ನೇರವಾಗಿ ಭೇಟಿ ಮಾಡಲು ಬಹುಶಃ ಮನೆ ಮನೆ ಅಭಿಯಾನ ನಡೆಸಬೇಕಾಗಿದೆ. ಪ್ರಧಾನಿ ಹಾಗೂ ಬಿಜೆಪಿ ದೇಶಕ್ಕೆ ಎಷ್ಟು ಒಳಿತನ್ನು ಮಾಡಿದೆ ಹಾಗೂ ಅವರಿಂದ ತಮಿಳುನಾಡಿನ ಮತದಾರರ ಜೀವನ ಶೈಲಿ ಹೇಗೆ ಸುಧಾರಿಸಲಿದೆ ಎಂಬುದರ ಕುರಿತು ಅರಿವು ಮೂಡಿಸಬೇಕಿದೆ” ಎಂದು ಅವರು ತಮ್ಮ ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡಿದ್ದಾರೆ.

ಎಐಎಡಿಎಂಕೆಯೊಂದಿಗಿನ ಮೈತ್ರಿ ಕುರಿತೂ ತಮ್ಮ ಅನಿಸಿಕೆ ಹಂಚಿಕೊಂಡಿರುವ ಖುಷ್ಬೂ ಸುಂದರ್, “ಎರಡೂ ಪಕ್ಷಗಳ ನಡುವೆ ಮೊದಲಿನಿಂದಲೂ ಸೌಹಾರ್ದ ಸಂಬಂಧವಿದೆ. ಚುನಾವಣೆಗಳಲ್ಲಿ ಹೋರಾಡಲು ನಮಗೆ ಎಐಎಡಿಎಂಕೆಯಂತಹ ಮೈತ್ರಿ ಪಕ್ಷ ಇದೆ ಎಂಬುದು ಸಂತಸದ ವಿಚಾರವಾಗಿದೆ. ಉಳಿದ ವಿಚಾರಗಳ ಕುರಿತು ಪಕ್ಷದ ಮುಖಂಡರು ಹಾಗೂ ಹಿರಿಯ ನಾಯಕರು ಮಾತುಕತೆ ನಡೆಸಿ, ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago