ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಈ ಕುರಿತು ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್ನಲ್ಲಿಲ್ಲ ಎಂದು ತಿಳಿಸಿದ್ದಾರೆ.
ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ನೀಡಲ್ಲ ಎಂದಿದ್ದಾರೆ.
ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಪ್ರತಿ ಪಕ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದ್ರೆ ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಅಂತ ಅಣ್ಣಾಮಲೈ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…