ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಈ ಕುರಿತು ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್ನಲ್ಲಿಲ್ಲ ಎಂದು ತಿಳಿಸಿದ್ದಾರೆ.
ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ನೀಡಲ್ಲ ಎಂದಿದ್ದಾರೆ.
ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಪ್ರತಿ ಪಕ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದ್ರೆ ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಅಂತ ಅಣ್ಣಾಮಲೈ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…